‘ರಾಜ್ಯದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ‘ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ಕಾರ್ಯಪಡೆ’ ರಚಿಸಿದ್ದಾರೆ. ಅದಕ್ಕೆ ಇನ್ಫೊಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ಮೂರ್ತಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿದ್ದಾರೆ. ಸುಧಾ ಮೂರ್ತಿ ಮತ್ತು ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ನೇತೃತ್ವದಲ್ಲಿ ಈಗಾಗಲೇ ಹಲವು ಸಭೆಗಳು ನಡೆದಿವೆ. ಅದರಲ್ಲಿ, ಮುಜರಾಯಿ ದೇವಾಲಯಗಳನ್ನು ಹೇಗೆ ಅಭಿವೃದ್ಧಿಪಡಿಸಬೇಕು ಎನ್ನುವುದನ್ನೂ ಪರಿಗಣಿಸಲಾಗುತ್ತದೆ. ಈ ಕುರಿತು ಕೂಡ ಶಿಫಾರಸು ಮಾಡಲಾಗುತ್ತದೆ. ಅತ್ಯಂತ ಪುರಾತನ, ಐತಿಹಾಸಿಕ ಹಾಗೂ ಇತಿಹಾಸವನ್ನು ಸಾರಿ ಹೇಳುವಂತಹ ಕಲಾಕೃತಿಗಳು ಇರುವಂಥ ದೇವಸ್ಥಾನಗಳನ್ನು ಇಲಾಖೆಯಿಂದ ಗುರುತು ಮಾಡುತ್ತಿದ್ದೇವೆ. ಅವುಗಳನ್ನು ಅಭಿವೃದ್ಧಿಪಡಿಸಲಾಗುವುದು’ ಎಂದು ಮಾಹಿತಿ ನೀಡಿದರು.