<p>ಯರಗಟ್ಟಿ: ‘ಭಕ್ತರು ತನು, ಮನ, ಧನಗಳಿಂದ ನಿಸ್ವಾರ್ಥ ಸೇವೆ ಸಲ್ಲಿಸಿದರೆ ಮಠಗಳು ಬೆಳೆಯಲು ಸಾಧ್ಯ’ ಎಂದು ಶಾಸಕ ವಿಶ್ವಾಸ್ ವೈದ್ಯ ಹೇಳಿದರು.</p>.<p>ಪಟ್ಟಣದ ಗೋಕಾಕ ರಸ್ತೆ ಪಕ್ಕದಲ್ಲಿರುವ ರಾಜರಾಜೇಶ್ವರಿ ಆಶ್ರಮದ ಜಾತ್ರಾ ಮಹೋತ್ಸವದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ದೇವಿಯ ಮಂದಿರದ ಅಭಿವೃದ್ಧಿಗಾಗಿ ಗಣಪತಿ ಶ್ರೀಗಳ ಶ್ರಮ ಅಪಾರವಾಗಿದೆ’ ಎಂದರು.</p>.<p>ಶಿಂದೋಗಿ ಮಠದ ಮುಕ್ತಾನಂದ ಸ್ವಾಮೀಜಿ ಮಾತನಾಡಿ, ‘ಪ್ರಕೃತಿಯಲ್ಲಿರುವ ಸಕಲ ಜೀವರಾಶಿಯಲ್ಲಿಯೇ ಮನುಷ್ಯನಿಗೆ ಶ್ರೇಷ್ಠ ಸ್ಥಾನವಿದೆ. ಅಂತಹ ಜೀವನವನ್ನು ವ್ಯರ್ಥವಾಗಿ ಕಳೆಯದೇ ಸತ್ಸಂಗದಲ್ಲಿ ಬೆರೆತು ಜೀವನ ಸಾರ್ಥಕ ಮಾಡಿಕೊಳ್ಳಬೇಕು’ ಎಂದರು.</p>.<p>ರಾಜರಾಜೇಶ್ವರಿ ಮಠದ ಗಣಪತಿ ಸ್ವಾಮೀಜಿ, ಬಳ್ಳೂರ-ಹಂಪಿ-ಚಿಕ್ಕಮುನವಳ್ಳಿ ಮಠದ ವಿದ್ಯಾನಂದ ಭಾರತೀ ಸ್ವಾಮೀಜಿ, ಮುನವಳ್ಳಿ ಮಠದ ಮುರಘರಾಜೇಂದ್ರ ಸ್ವಾಮೀಜಿ, ಹಡಗಿನಾಳ ಮಠದ ಮಲ್ಲೇಶ ಶರಣರು, ತಹಶೀಲ್ದಾರ್ ಎಂ.ವಿ.ಗುಂಡಪ್ಪಗೋಳ, ಬೆಳಗಾವಿ ವೈದ್ಯ ರವಿ ಪಾಟೀ ಲ ಇದ್ದರು.</p>.<p>ವಿವಿಧ ಕ್ಷೇತ್ರಗಳ ಸಾಧಕರು ಮತ್ತು ದಾನಿಗಳನ್ನು ಸನ್ಮಾನಿಸಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260501-21-1646951212</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಯರಗಟ್ಟಿ: ‘ಭಕ್ತರು ತನು, ಮನ, ಧನಗಳಿಂದ ನಿಸ್ವಾರ್ಥ ಸೇವೆ ಸಲ್ಲಿಸಿದರೆ ಮಠಗಳು ಬೆಳೆಯಲು ಸಾಧ್ಯ’ ಎಂದು ಶಾಸಕ ವಿಶ್ವಾಸ್ ವೈದ್ಯ ಹೇಳಿದರು.</p>.<p>ಪಟ್ಟಣದ ಗೋಕಾಕ ರಸ್ತೆ ಪಕ್ಕದಲ್ಲಿರುವ ರಾಜರಾಜೇಶ್ವರಿ ಆಶ್ರಮದ ಜಾತ್ರಾ ಮಹೋತ್ಸವದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ದೇವಿಯ ಮಂದಿರದ ಅಭಿವೃದ್ಧಿಗಾಗಿ ಗಣಪತಿ ಶ್ರೀಗಳ ಶ್ರಮ ಅಪಾರವಾಗಿದೆ’ ಎಂದರು.</p>.<p>ಶಿಂದೋಗಿ ಮಠದ ಮುಕ್ತಾನಂದ ಸ್ವಾಮೀಜಿ ಮಾತನಾಡಿ, ‘ಪ್ರಕೃತಿಯಲ್ಲಿರುವ ಸಕಲ ಜೀವರಾಶಿಯಲ್ಲಿಯೇ ಮನುಷ್ಯನಿಗೆ ಶ್ರೇಷ್ಠ ಸ್ಥಾನವಿದೆ. ಅಂತಹ ಜೀವನವನ್ನು ವ್ಯರ್ಥವಾಗಿ ಕಳೆಯದೇ ಸತ್ಸಂಗದಲ್ಲಿ ಬೆರೆತು ಜೀವನ ಸಾರ್ಥಕ ಮಾಡಿಕೊಳ್ಳಬೇಕು’ ಎಂದರು.</p>.<p>ರಾಜರಾಜೇಶ್ವರಿ ಮಠದ ಗಣಪತಿ ಸ್ವಾಮೀಜಿ, ಬಳ್ಳೂರ-ಹಂಪಿ-ಚಿಕ್ಕಮುನವಳ್ಳಿ ಮಠದ ವಿದ್ಯಾನಂದ ಭಾರತೀ ಸ್ವಾಮೀಜಿ, ಮುನವಳ್ಳಿ ಮಠದ ಮುರಘರಾಜೇಂದ್ರ ಸ್ವಾಮೀಜಿ, ಹಡಗಿನಾಳ ಮಠದ ಮಲ್ಲೇಶ ಶರಣರು, ತಹಶೀಲ್ದಾರ್ ಎಂ.ವಿ.ಗುಂಡಪ್ಪಗೋಳ, ಬೆಳಗಾವಿ ವೈದ್ಯ ರವಿ ಪಾಟೀ ಲ ಇದ್ದರು.</p>.<p>ವಿವಿಧ ಕ್ಷೇತ್ರಗಳ ಸಾಧಕರು ಮತ್ತು ದಾನಿಗಳನ್ನು ಸನ್ಮಾನಿಸಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260501-21-1646951212</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>