<p>ಸವದತ್ತಿ: ‘ಬನದ ಹುಣ್ಣಿಮೆ ಮತ್ತು ಭರತ ಹುಣ್ಣಿಮೆ ಪ್ರಯುಕ್ತ ನಡೆಯುವ ಜಾತ್ರೆಯಲ್ಲಿ ಭಕ್ತರಿಗೆ ಅಗತ್ಯ ಮೂಲಸೌಲಭ್ಯ ಕಲ್ಪಿಸಬೇಕು. ಎಲ್ಲ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಸಮನ್ವಯದಿಂದ ಕೆಲಸ ಮಾಡಿ ಜಾತ್ರೆ ಯಶಸ್ವಿಗೊಳಿಸಬೇಕು’ ಎಂದು ಶಾಸಕ ವಿಶ್ವಾಸ ವೈದ್ಯ ಸೂಚಿಸಿದರು.</p>.<p>ಯಲ್ಲಮ್ಮ ದೇವಸ್ಥಾನದ ಸಭಾಭವನದಲ್ಲಿ ಶನಿವಾರ ನಡೆದ ಜಾತ್ರೆ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಜನವರಿ 1ರಿಂದ ಫೆಬ್ರುವರಿ 8ರವರೆಗೆ ಎರಡೂ ಹುಣ್ಣಿಮೆಗಳ ಜಾತ್ರೆ ನೆರವೇರುತ್ತವೆ. ದೇವಿ ದರ್ಶನಕ್ಕೆ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಅವರಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ವಹಿಸಬೇಕು’ ಎಂದರು.</p>.<p>‘ಎಲ್ಲ ನೀರಿನ ಟ್ಯಾಂಕ್ಗಳನ್ನು ಸ್ವಚ್ಛಗೊಳಿಸಿ, ಶುದ್ಧ ಕುಡಿಯುವ ನೀರು ಒದಗಿಸಬೇಕು. ನೀರಿನ ಕೊರತೆಯಾದರೆ ಹೆಚ್ಚುವರಿಯಾಗಿ ಬಹುಗ್ರಾಮ ಕುಡಿಯುವ ಯೋಜನೆ ನೀರು ಬಳಸಿಕೊಳ್ಳಬೇಕು. ನೀರು ತಲುಪದ ಕಡೆ ಟ್ಯಾಂಕರ್ ವ್ಯವಸ್ಥೆ ಒದಗಿಸಬೇಕು’ ಎಂದು ನಿರ್ದೇಶನ ಕೊಟ್ಟರು.</p>.<p>ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸಿದ್ದು ಹುಲ್ಲೊಳ್ಳಿ, ‘ಗುಡ್ಡದಲ್ಲಿ ವ್ಯಾಪಾರಕ್ಕಾಗಿ 10x10 ಉದ್ದಗಲದ ಅಳತೆಯ 365 ಜಾಗ ಗುರುತಿಸಲಾಗಿದೆ. ಅರ್ಜಿ ಸಲ್ಲಿಸಿ ₹25 ಸಾವಿರ ಶುಲ್ಕ ಪಾವತಿಸಿದ ಅಂಗಡಿಕಾರರಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ ನೀಡಲಾಗುವುದು’ ಎಂದರು.</p>.<p>ತಾಲ್ಲೂಕು ಆರೋಗ್ಯಾಧಿಕಾರಿ ಶ್ರೀಪಾದ ಸಬನೀಸ್, ‘ನಮ್ಮ ಕ್ಲಿನಿಕ್ಗೆ ಅಗತ್ಯವಿರುವ ಕೊಠಡಿಯನ್ನು ದೇವಸ್ಥಾನದಿಂದ ನೀಡಬೇಕು. ಜಾತ್ರೆ ವೇಳೆ ನಕಲಿ ವೈದ್ಯರ ಹಾವಳಿ ಹೆಚ್ಚುತ್ತದೆ. ಪ್ರಾಧಿಕಾರದಿಂದ ಇದನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕು’ ಎಂದರು.</p>.<p>ಉಪ ಕಾರ್ಯದರ್ಶಿ ನಾಗರತ್ನಾ ಚೋಳಿನ ಮಾತನಾಡಿದರು. ತಹಶೀಲ್ದಾರ್ ಎಂ.ಎನ್. ಹೆಗ್ಗನ್ನವರ, ಪೊಲೀಸ್ ಇನ್ಸ್ಪೆಕ್ಟರ್ ಸುರೇಶ ಬೆಂಡೆಗುಂಬಳ, ಎಚ್.ಎಂ.ಮಲ್ಲನಗೌಡ್ರ, ಲಕ್ಷ್ಮಣ ಗೌಡಿ, ಮಂಜುನಾಥ ಪವಾರ, ಶಿವಾನಂದ ಪಟ್ಟಣಶೆಟ್ಟಿ, ಸಿದ್ದನಗೌಡ ಗೂಡರಾಶಿ, ಮಂಜುನಾಥ ಪವಾರ ಇದ್ದರು.</p>.<div><blockquote>ಜಾತ್ರೆ ವೇಳೆ ಸ್ಥಳೀಯ ಅಂಗಡಿಗಳಲ್ಲಿ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಲು ಅಬಕಾರಿ ಇಲಾಖೆ ಕ್ರಮ ವಹಿಸಬೇಕು </blockquote><span class="attribution">ಚಿದಂಬರ ಮಡಿವಾಳರ ಡಿವೈಎಸ್ಪಿ</span></div>. <p><strong>‘ನಿಗಾ ವಹಿಸಲಾಗುವುದು’</strong></p><p> ‘ಎಣ್ಣೆಹೊಂಡ ದೇವಸ್ಥಾನದ ಸುತ್ತಲಿನ ಪರಿಸರದಲ್ಲಿ ಕಳ್ಳತನ ಹೆಚ್ಚಿದ ಕಾರಣ ತಾತ್ಕಾಲಿಕ ವಾಚ್ ಟವರ್ ಹಾಗೂ ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಸಿ ನಿಗಾ ವಹಿಸಲಾಗುವುದು. ಬಸ್ ನಿಲ್ದಾಣ ಸ್ಥಳಾಂತರಕ್ಕೆ ಕ್ರಮ ವಹಿಸಲಾಗುವುದು’ ಎಂದು ಸಿದ್ದು ಹುಲ್ಲೊಳ್ಳಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸವದತ್ತಿ: ‘ಬನದ ಹುಣ್ಣಿಮೆ ಮತ್ತು ಭರತ ಹುಣ್ಣಿಮೆ ಪ್ರಯುಕ್ತ ನಡೆಯುವ ಜಾತ್ರೆಯಲ್ಲಿ ಭಕ್ತರಿಗೆ ಅಗತ್ಯ ಮೂಲಸೌಲಭ್ಯ ಕಲ್ಪಿಸಬೇಕು. ಎಲ್ಲ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಸಮನ್ವಯದಿಂದ ಕೆಲಸ ಮಾಡಿ ಜಾತ್ರೆ ಯಶಸ್ವಿಗೊಳಿಸಬೇಕು’ ಎಂದು ಶಾಸಕ ವಿಶ್ವಾಸ ವೈದ್ಯ ಸೂಚಿಸಿದರು.</p>.<p>ಯಲ್ಲಮ್ಮ ದೇವಸ್ಥಾನದ ಸಭಾಭವನದಲ್ಲಿ ಶನಿವಾರ ನಡೆದ ಜಾತ್ರೆ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಜನವರಿ 1ರಿಂದ ಫೆಬ್ರುವರಿ 8ರವರೆಗೆ ಎರಡೂ ಹುಣ್ಣಿಮೆಗಳ ಜಾತ್ರೆ ನೆರವೇರುತ್ತವೆ. ದೇವಿ ದರ್ಶನಕ್ಕೆ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಅವರಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ವಹಿಸಬೇಕು’ ಎಂದರು.</p>.<p>‘ಎಲ್ಲ ನೀರಿನ ಟ್ಯಾಂಕ್ಗಳನ್ನು ಸ್ವಚ್ಛಗೊಳಿಸಿ, ಶುದ್ಧ ಕುಡಿಯುವ ನೀರು ಒದಗಿಸಬೇಕು. ನೀರಿನ ಕೊರತೆಯಾದರೆ ಹೆಚ್ಚುವರಿಯಾಗಿ ಬಹುಗ್ರಾಮ ಕುಡಿಯುವ ಯೋಜನೆ ನೀರು ಬಳಸಿಕೊಳ್ಳಬೇಕು. ನೀರು ತಲುಪದ ಕಡೆ ಟ್ಯಾಂಕರ್ ವ್ಯವಸ್ಥೆ ಒದಗಿಸಬೇಕು’ ಎಂದು ನಿರ್ದೇಶನ ಕೊಟ್ಟರು.</p>.<p>ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸಿದ್ದು ಹುಲ್ಲೊಳ್ಳಿ, ‘ಗುಡ್ಡದಲ್ಲಿ ವ್ಯಾಪಾರಕ್ಕಾಗಿ 10x10 ಉದ್ದಗಲದ ಅಳತೆಯ 365 ಜಾಗ ಗುರುತಿಸಲಾಗಿದೆ. ಅರ್ಜಿ ಸಲ್ಲಿಸಿ ₹25 ಸಾವಿರ ಶುಲ್ಕ ಪಾವತಿಸಿದ ಅಂಗಡಿಕಾರರಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ ನೀಡಲಾಗುವುದು’ ಎಂದರು.</p>.<p>ತಾಲ್ಲೂಕು ಆರೋಗ್ಯಾಧಿಕಾರಿ ಶ್ರೀಪಾದ ಸಬನೀಸ್, ‘ನಮ್ಮ ಕ್ಲಿನಿಕ್ಗೆ ಅಗತ್ಯವಿರುವ ಕೊಠಡಿಯನ್ನು ದೇವಸ್ಥಾನದಿಂದ ನೀಡಬೇಕು. ಜಾತ್ರೆ ವೇಳೆ ನಕಲಿ ವೈದ್ಯರ ಹಾವಳಿ ಹೆಚ್ಚುತ್ತದೆ. ಪ್ರಾಧಿಕಾರದಿಂದ ಇದನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕು’ ಎಂದರು.</p>.<p>ಉಪ ಕಾರ್ಯದರ್ಶಿ ನಾಗರತ್ನಾ ಚೋಳಿನ ಮಾತನಾಡಿದರು. ತಹಶೀಲ್ದಾರ್ ಎಂ.ಎನ್. ಹೆಗ್ಗನ್ನವರ, ಪೊಲೀಸ್ ಇನ್ಸ್ಪೆಕ್ಟರ್ ಸುರೇಶ ಬೆಂಡೆಗುಂಬಳ, ಎಚ್.ಎಂ.ಮಲ್ಲನಗೌಡ್ರ, ಲಕ್ಷ್ಮಣ ಗೌಡಿ, ಮಂಜುನಾಥ ಪವಾರ, ಶಿವಾನಂದ ಪಟ್ಟಣಶೆಟ್ಟಿ, ಸಿದ್ದನಗೌಡ ಗೂಡರಾಶಿ, ಮಂಜುನಾಥ ಪವಾರ ಇದ್ದರು.</p>.<div><blockquote>ಜಾತ್ರೆ ವೇಳೆ ಸ್ಥಳೀಯ ಅಂಗಡಿಗಳಲ್ಲಿ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಲು ಅಬಕಾರಿ ಇಲಾಖೆ ಕ್ರಮ ವಹಿಸಬೇಕು </blockquote><span class="attribution">ಚಿದಂಬರ ಮಡಿವಾಳರ ಡಿವೈಎಸ್ಪಿ</span></div>. <p><strong>‘ನಿಗಾ ವಹಿಸಲಾಗುವುದು’</strong></p><p> ‘ಎಣ್ಣೆಹೊಂಡ ದೇವಸ್ಥಾನದ ಸುತ್ತಲಿನ ಪರಿಸರದಲ್ಲಿ ಕಳ್ಳತನ ಹೆಚ್ಚಿದ ಕಾರಣ ತಾತ್ಕಾಲಿಕ ವಾಚ್ ಟವರ್ ಹಾಗೂ ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಸಿ ನಿಗಾ ವಹಿಸಲಾಗುವುದು. ಬಸ್ ನಿಲ್ದಾಣ ಸ್ಥಳಾಂತರಕ್ಕೆ ಕ್ರಮ ವಹಿಸಲಾಗುವುದು’ ಎಂದು ಸಿದ್ದು ಹುಲ್ಲೊಳ್ಳಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>