<p>ಪ್ರಜಾವಾಣಿ ವಾರ್ತೆ</p>.<p><strong>ಸವದತ್ತಿ</strong>: ತಾಲ್ಲೂಕಿನ ಯಲ್ಲಮ್ಮನಗುಡ್ಡದ ಯಲ್ಲಮ್ಮ ದೇವಿ ದೇವಸ್ಥಾನದಲ್ಲಿ 2025ರ ಜುಲೈನಿಂದ ಈವರೆಗೆ ಆರು ಹಂತದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ₹11.06 ಕೋಟಿ ಮೌಲ್ಯದ ಕಾಣಿಕೆ ಸಂಗ್ರಹವಾಗಿದೆ.</p>.<p>ಇದರಲ್ಲಿ ₹9.92 ಕೋಟಿ ನಗದು, ₹74.89 ಲಕ್ಷ ಮೌಲ್ಯದ 635 ಗ್ರಾಂ ಚಿನ್ನಾಭರಣ ಹಾಗೂ ₹38.35 ಲಕ್ಷ ಮೌಲ್ಯದ 21.18 ಕೆ.ಜಿ ಬೆಳ್ಳಿ ಆಭರಣ ಸೇರಿವೆ.</p>.<p>ಈ ದೇಗುಲಕ್ಕೆ ದೇಶದ ನಾನಾ ಭಾಗಗಳಿಂದ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ತಮ್ಮ ಇಷ್ಟಾರ್ಥ ಈಡೇರಿದ ಹಿನ್ನೆಲೆಯಲ್ಲಿ ‘ಎಲ್ಲರ ಅಮ್ಮ’ ಯಲ್ಲಮ್ಮ ದೇವಿಗೆ ನಗದಿನ ಜತೆಗೆ, ಚಿನ್ನ ಮತ್ತು ಬೆಳ್ಳಿ ಆಭರಣವನ್ನು ಅರ್ಪಿಸಿ ಭಕ್ತಿ ಮೆರೆಯುತ್ತಾರೆ.</p>.<p>ಭಕ್ತರು ಹುಂಡಿಯಲ್ಲಿ ಹಾಕಿದ್ದ ಕಾಣಿಕೆಯನ್ನು ಮುಜರಾಯಿ ಇಲಾಖೆ, ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ, ತಹಶೀಲ್ದಾರ್ ಕಚೇರಿ, ಯಲ್ಲಮ್ಮ ದೇವಿ ದೇವಸ್ಥಾನ ಹಾಗೂ ಕೆನರಾ ಬ್ಯಾಂಕ್ ಸಿಬ್ಬಂದಿ ಎಣಿಕೆ ಮಾಡಿದರು. </p>.<p>‘ಪ್ರತಿದಿನ ಎಣಿಕೆ ಮುಕ್ತಾಯಗೊಂಡ ನಂತರ, ಹಣವನ್ನು ದೇವಸ್ಥಾನದ ಹೆಸರಿನಲ್ಲಿರುವ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತದೆ. ದೇವಸ್ಥಾನದ ಅಭಿವೃದ್ಧಿ ಕೆಲಸ, ಸಿಬ್ಬಂದಿ ವೇತನ, ವಿದ್ಯುತ್ ಬಿಲ್ ಮತ್ತಿತರ ಕೆಲಸಗಳಿಗೆ ಈ ಹಣ ಬಳಸಲಾಗುತ್ತದೆ’ ಎಂದು ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಉಪ ಕಾರ್ಯದರ್ಶಿ ನಾಗರತ್ನಾ ಚೋಳಿನ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p><strong>ಸವದತ್ತಿ</strong>: ತಾಲ್ಲೂಕಿನ ಯಲ್ಲಮ್ಮನಗುಡ್ಡದ ಯಲ್ಲಮ್ಮ ದೇವಿ ದೇವಸ್ಥಾನದಲ್ಲಿ 2025ರ ಜುಲೈನಿಂದ ಈವರೆಗೆ ಆರು ಹಂತದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ₹11.06 ಕೋಟಿ ಮೌಲ್ಯದ ಕಾಣಿಕೆ ಸಂಗ್ರಹವಾಗಿದೆ.</p>.<p>ಇದರಲ್ಲಿ ₹9.92 ಕೋಟಿ ನಗದು, ₹74.89 ಲಕ್ಷ ಮೌಲ್ಯದ 635 ಗ್ರಾಂ ಚಿನ್ನಾಭರಣ ಹಾಗೂ ₹38.35 ಲಕ್ಷ ಮೌಲ್ಯದ 21.18 ಕೆ.ಜಿ ಬೆಳ್ಳಿ ಆಭರಣ ಸೇರಿವೆ.</p>.<p>ಈ ದೇಗುಲಕ್ಕೆ ದೇಶದ ನಾನಾ ಭಾಗಗಳಿಂದ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ತಮ್ಮ ಇಷ್ಟಾರ್ಥ ಈಡೇರಿದ ಹಿನ್ನೆಲೆಯಲ್ಲಿ ‘ಎಲ್ಲರ ಅಮ್ಮ’ ಯಲ್ಲಮ್ಮ ದೇವಿಗೆ ನಗದಿನ ಜತೆಗೆ, ಚಿನ್ನ ಮತ್ತು ಬೆಳ್ಳಿ ಆಭರಣವನ್ನು ಅರ್ಪಿಸಿ ಭಕ್ತಿ ಮೆರೆಯುತ್ತಾರೆ.</p>.<p>ಭಕ್ತರು ಹುಂಡಿಯಲ್ಲಿ ಹಾಕಿದ್ದ ಕಾಣಿಕೆಯನ್ನು ಮುಜರಾಯಿ ಇಲಾಖೆ, ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ, ತಹಶೀಲ್ದಾರ್ ಕಚೇರಿ, ಯಲ್ಲಮ್ಮ ದೇವಿ ದೇವಸ್ಥಾನ ಹಾಗೂ ಕೆನರಾ ಬ್ಯಾಂಕ್ ಸಿಬ್ಬಂದಿ ಎಣಿಕೆ ಮಾಡಿದರು. </p>.<p>‘ಪ್ರತಿದಿನ ಎಣಿಕೆ ಮುಕ್ತಾಯಗೊಂಡ ನಂತರ, ಹಣವನ್ನು ದೇವಸ್ಥಾನದ ಹೆಸರಿನಲ್ಲಿರುವ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತದೆ. ದೇವಸ್ಥಾನದ ಅಭಿವೃದ್ಧಿ ಕೆಲಸ, ಸಿಬ್ಬಂದಿ ವೇತನ, ವಿದ್ಯುತ್ ಬಿಲ್ ಮತ್ತಿತರ ಕೆಲಸಗಳಿಗೆ ಈ ಹಣ ಬಳಸಲಾಗುತ್ತದೆ’ ಎಂದು ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಉಪ ಕಾರ್ಯದರ್ಶಿ ನಾಗರತ್ನಾ ಚೋಳಿನ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>