<p><strong>ಸವದತ್ತಿ</strong>: ‘ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರ ವಹಿಸಿಕೊಂಡು 2 ವರ್ಷ ಪೂರ್ಣಗೊಂಡಿವೆ. ಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಗಳನ್ನು ಈಡೇರಿಸಿದೆ. ವಿಶೇಷವಾಗಿ ಎರಡು ಪ್ರಾಧಿಕಾರ ರಚಿಸಿ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿಗೆ ವೇಗ ಹೆಚ್ಚಿಸಲಾಗಿದೆ’ ಎಂದು ಶಾಸಕ ವಿಶ್ವಾಸ್ ವೈದ್ಯ ಹೇಳಿದರು.</p>.<p>ಇಲ್ಲಿನ ಎಸ್ಕೆ ಹೈಸ್ಕೂಲ್ ಮೈದಾನದಲ್ಲಿ ಶುಕ್ರವಾರ ನಡೆದ ಸ್ವಾತಂತ್ರ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.</p>.<p>ವಿವಿಧ ಅನುದಾನ ಸೇರಿ ಒಟ್ಟು ₹215.37 ಕೋಟಿ ಅನುದಾನ ಮೀಸಲಿರಿಸಿ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ. ಸದ್ಯ ನಡೆದ ಅಭಿವೃದ್ಧಿಯಿಂದ ಗುಡ್ಡದ ವ್ಯಾಪಾರಿಗಳಿಗೆ ಸಮಸ್ಯೆಯಾಗಿದೆ. ಭವಿಷ್ಯದಲ್ಲಿ ವ್ಯಾಪಾರಿಗಳ ವಹಿವಾಟು ಹಾಗೂ ಆದಾಯ ದ್ವಿಗುಣಗೊಳಿಸಲು ವ್ಯಾಪಾರಿ ಸಂಕೀರ್ಣ ನಿರ್ಮಿಸಲಾಗುವುದು’ ಎಂದರು.</p>.<p>ತಹಶೀಲ್ದಾರ ಎಂ.ಎನ್. ಹೆಗ್ಗಣ್ಣವರ ಮಾತನಾಡಿದರು.</p>.<p>ಮಕ್ಕಳ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಆಕರ್ಷಿಸಿದವು. ಪೊಲೀಸ್, ಗೃಹರಕ್ಷಕ, ಎನ್ಸಿಸಿ, ಸ್ಕೌಟ್ ಮತ್ತು ಗೈಡ್ಸ್ಗಳಿಂದ ಶಾಸಕ ವಿಶ್ವಾಸ್ ವೈದ್ಯ ಗೌರವ ರಕ್ಷೆ ಸ್ವೀಕರಿಸಿದರು. </p>.<p>ಇದಕ್ಕೂ ಮೊದಲು ತಹಶೀಲ್ದಾರ್ ಕಚೇರಿಯಿಂದ ಹೊರಟ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ರಾಯಣ್ಣ, ಅಂಬೇಡ್ಕರ್, ಲಿಂಗರಾಜರ ಪ್ರತಿಮೆಗಳಿಗೆ ಗೌರವ ಮಾಲಾರ್ಪಣೆ ಸಲ್ಲಿಸಲಾಯಿತು. </p>.<p>ಪ್ರಾಧಿಕಾರದ ಕಾರ್ಯದರ್ಶಿ ಅಶೋಕ ದುಡಗುಂಟಿ, ಪಿಐ ಡಿ.ಎಸ್. ಧರ್ಮಟ್ಟಿ, ಬಿಇಒ ಎ.ಎ.ಖಾಜಿ, ಮುಖ್ಯಾಧಿಕಾರಿ ಸಂಗನಬಸಯ್ಯ, ಇಒ ಆನಂದ ಬಡಕುಂದ್ರಿ, ಅಶೋಕ ಮುರಗೋಡ, ಅಶ್ವಥ್ ವೈದ್ಯ, ಪಿಎಸ್ಐ ಕೆ.ಎಂ.ಬನ್ನೂರ, ಪ್ರವೀಣ ರಾಮಪ್ಪನವರ ಸೇರಿದಂತೆ ಅನೇಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸವದತ್ತಿ</strong>: ‘ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರ ವಹಿಸಿಕೊಂಡು 2 ವರ್ಷ ಪೂರ್ಣಗೊಂಡಿವೆ. ಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಗಳನ್ನು ಈಡೇರಿಸಿದೆ. ವಿಶೇಷವಾಗಿ ಎರಡು ಪ್ರಾಧಿಕಾರ ರಚಿಸಿ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿಗೆ ವೇಗ ಹೆಚ್ಚಿಸಲಾಗಿದೆ’ ಎಂದು ಶಾಸಕ ವಿಶ್ವಾಸ್ ವೈದ್ಯ ಹೇಳಿದರು.</p>.<p>ಇಲ್ಲಿನ ಎಸ್ಕೆ ಹೈಸ್ಕೂಲ್ ಮೈದಾನದಲ್ಲಿ ಶುಕ್ರವಾರ ನಡೆದ ಸ್ವಾತಂತ್ರ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.</p>.<p>ವಿವಿಧ ಅನುದಾನ ಸೇರಿ ಒಟ್ಟು ₹215.37 ಕೋಟಿ ಅನುದಾನ ಮೀಸಲಿರಿಸಿ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ. ಸದ್ಯ ನಡೆದ ಅಭಿವೃದ್ಧಿಯಿಂದ ಗುಡ್ಡದ ವ್ಯಾಪಾರಿಗಳಿಗೆ ಸಮಸ್ಯೆಯಾಗಿದೆ. ಭವಿಷ್ಯದಲ್ಲಿ ವ್ಯಾಪಾರಿಗಳ ವಹಿವಾಟು ಹಾಗೂ ಆದಾಯ ದ್ವಿಗುಣಗೊಳಿಸಲು ವ್ಯಾಪಾರಿ ಸಂಕೀರ್ಣ ನಿರ್ಮಿಸಲಾಗುವುದು’ ಎಂದರು.</p>.<p>ತಹಶೀಲ್ದಾರ ಎಂ.ಎನ್. ಹೆಗ್ಗಣ್ಣವರ ಮಾತನಾಡಿದರು.</p>.<p>ಮಕ್ಕಳ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಆಕರ್ಷಿಸಿದವು. ಪೊಲೀಸ್, ಗೃಹರಕ್ಷಕ, ಎನ್ಸಿಸಿ, ಸ್ಕೌಟ್ ಮತ್ತು ಗೈಡ್ಸ್ಗಳಿಂದ ಶಾಸಕ ವಿಶ್ವಾಸ್ ವೈದ್ಯ ಗೌರವ ರಕ್ಷೆ ಸ್ವೀಕರಿಸಿದರು. </p>.<p>ಇದಕ್ಕೂ ಮೊದಲು ತಹಶೀಲ್ದಾರ್ ಕಚೇರಿಯಿಂದ ಹೊರಟ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ರಾಯಣ್ಣ, ಅಂಬೇಡ್ಕರ್, ಲಿಂಗರಾಜರ ಪ್ರತಿಮೆಗಳಿಗೆ ಗೌರವ ಮಾಲಾರ್ಪಣೆ ಸಲ್ಲಿಸಲಾಯಿತು. </p>.<p>ಪ್ರಾಧಿಕಾರದ ಕಾರ್ಯದರ್ಶಿ ಅಶೋಕ ದುಡಗುಂಟಿ, ಪಿಐ ಡಿ.ಎಸ್. ಧರ್ಮಟ್ಟಿ, ಬಿಇಒ ಎ.ಎ.ಖಾಜಿ, ಮುಖ್ಯಾಧಿಕಾರಿ ಸಂಗನಬಸಯ್ಯ, ಇಒ ಆನಂದ ಬಡಕುಂದ್ರಿ, ಅಶೋಕ ಮುರಗೋಡ, ಅಶ್ವಥ್ ವೈದ್ಯ, ಪಿಎಸ್ಐ ಕೆ.ಎಂ.ಬನ್ನೂರ, ಪ್ರವೀಣ ರಾಮಪ್ಪನವರ ಸೇರಿದಂತೆ ಅನೇಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>