ಉಗರಗೋಳ: ಲೋಕಸಭೆ ಚುನಾವಣೆ ಮತದಾನ ಪ್ರಕ್ರಿಯೆ ಹಿನ್ನೆಲೆಯಲ್ಲಿ ಸಮೀಪದ ಯಲ್ಲಮ್ಮನಗುಡ್ಡದ ಯಲ್ಲಮ್ಮ ದೇವಿ ದೇವಸ್ಥಾನದಲ್ಲಿ ಮಂಗಳವಾರ ದರ್ಶನ ಪಡೆಯಲು ಭಕ್ತರಿಗೆ ನಿರ್ಬಂಧ ವಿಧಿಸಲಾಗಿತ್ತು. ಹಾಗಾಗಿ ಸದಾ ಭಕ್ತರಿಂದ ತುಂಬಿರುತ್ತಿದ್ದ ಯಲ್ಲಮ್ಮ ದೇವಸ್ಥಾನದ ಅಂಗಳ ಬೆಳಗಿನ ಅವಧಿಯಲ್ಲಿ ಭಣಗುಡುತ್ತಿತ್ತು. ಅಧಿಕಾರಿಗಳು, ಅರ್ಚಕರ ಸಮ್ಮುಖದಲ್ಲೇ ‘ಎಲ್ಲರ ಅಮ್ಮ’ ಯಲ್ಲಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.