‘ನೀರಾವರಿ ಯೋಜನೆಗೆ ಪ್ರತಿ ವರ್ಷ ₹ 50 ಸಾವಿರ ಕೋಟಿ ನೀಡುತ್ತೇವೆ ಎಂದು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಹೇಳಿಕೊಂಡಿತ್ತು. ಆದರೆ, ಅಷ್ಟು ಪ್ರಮಾಣದ ಹಣ ಖರ್ಚಾಗಿಲ್ಲ. ಜಿಲ್ಲೆಯ ಪ್ರಮುಖ ಯೋಜನೆ ಭದ್ರಾ ಮೇಲ್ದಂಡೆ ಯೋಜನೆ ಆಮೆಗತಿಯಲ್ಲಿ ಸಾಗುತ್ತಿದೆ. ರಾಜ್ಯದ ಪ್ರತಿ ತಾಲ್ಲೂಕುಗಳಲ್ಲಿ ಹೈಟೆಕ್ ಆಸ್ಪತ್ರೆಗಳನ್ನು ನಿರ್ಮಿಸುವುದಾಗಿ ಭರವಸೆ ನೀಡಿದ್ದರು. ಆದರೆ, ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆ ಪರಿಸ್ಥಿತಿ ಹೇಗಿದೆ ಎಂದು ನಿಮಗೂ ಗೊತ್ತಿದೆ. ಚಿತ್ರದುರ್ಗದಲ್ಲಿ ಮೆಡಿಕಲ್ ಕಾಲೇಜು ಆರಂಭಿಸುತ್ತೇವೆ ಎಂದು ಹೇಳಿದ ಮಾತು ಈಡೇರಿಲ್ಲ’ ಎಂದು ಈಡೇರದ ಭರವಸೆಗಳ ಪಟ್ಟಿಯನ್ನು ನವೀನ್ ತೆರೆದಿಟ್ಟರು.