ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಕ್ಕೇರಿ | ಯುವಕ ಸಾವು: ವೈದ್ಯನ ಮೇಲೆ ಆರೋಪ

Published 13 ನವೆಂಬರ್ 2023, 13:49 IST
Last Updated 13 ನವೆಂಬರ್ 2023, 13:49 IST
ಅಕ್ಷರ ಗಾತ್ರ

ಹುಕ್ಕೇರಿ: ಪಟ್ಟಣದ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯಲು ಹೋದ ಯುವಕನೊಬ್ಬ ಮೃತಪಟ್ಟಿದ್ದು, ವೈದ್ಯರ ಚಿಕಿತ್ಸೆಯೇ ಯುವಕನ ಸಾವಿಗೆ ಕಾರಣ ಎಂದು ಪಾಲಕರು ದೂರು ನೀಡಿದ್ದಾರೆ.

ಲಕ್ಷ್ಮಿಗಲ್ಲಿ ನಿವಾಸಿ ಮೋಸೀನ್ ಆದಮ್ ಕೋಲಾರ (25) ಮೃತ ವ್ಯಕ್ತಿ. ಪಟ್ಟಣದ ಗಾಂಧಿ ಬಡಾವಣೆಯಲ್ಲಿನ ‘ಲೈಫ್ ಲೈನ್’ ಆಸ್ಪತ್ರೆಯಲ್ಲಿ ಶುಕ್ರವಾರ ಚಿಕಿತ್ಸೆಗೆಂದು ಹೋದಾಗ ವೈದ್ಯ ಡಾ.ಅರ್ಷದ್ಅಯೂಬ್ ಮಹ್ಮದರಫಿಕ ಮಕಾನದಾರ ಅವರು ರೋಗಿಯನ್ನು ತಪಾಸಣೆ ಮಾಡಿ ಚುಚ್ಚುಮದ್ದು ನೀಡಿದ್ದರು. ಚಿಕಿತ್ಸೆ ನಂತರ ನಂತರ ರೋಗಿಗೆ ಗ್ಯಾಸ್ ಗ್ಯಾಂಗ್ರಿನ್ ಆಗಿ ಬೆಳಗಾವಿ ವೇಣುಗ್ರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಭಾನುವಾರ ಬೆಳಿಗ್ಗೆ ಯುವಕ ಮೃತಪಟ್ಟಿದ್ದಾಗಿ ದೂರಿನಲ್ಲಿ ತಿಳಿಸಲಾಗಿದೆ.

ಸ್ಥಳಕ್ಕೆ ಭೇಟಿ ನೀಡಿದ ಪಿಎಸ್ಐ ಅಭಿಜೀತ ಅಕ್ಕತಂಗೇರಹಾಳ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT