ಬೆಳಗಾವಿ: ತಾಲ್ಲೂಕಿನ ಕೇದನೂರ ಗ್ರಾಮದಲ್ಲಿ ಯುವಕ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ನಡೆದಿದೆ.
ರಾಜು ಸಿದ್ದಪ್ಪ ಅಜಾನಿ (18) ಮೃತ. ‘ಸದಾ ಮೊಬೈಲ್ನಲ್ಲಿ ಗೇಮ್ ಆಡುತ್ತಿರಬೇಡ ಎಂದು ಬುದ್ಧಿವಾದ ಹೇಳಿದ್ದೆವು. ಇದರಿಂದ ಬೇಸರಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ’ ಎಂದು ಪೋಷಕರು ದೂರು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದರು.