ಉದ್ಘಾಟಿಸಿದ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಮಾತನಾಡಿ, ‘ವಾಸ್ತವ ಪ್ರಪಂಚಕ್ಕೆ ಸ್ಪಂದಿಸುವಂತಹ ಶಿಕ್ಷಣ ವ್ಯವಸ್ಥೆ ಇಂದಿನ ಅಗತ್ಯವಾಗಿದೆ. ಮಾನವೀಯತೆ, ನೈತಿಕತೆ ಹಾಗೂ ಮಾನವ ಜೀವನದ ಶೈಲಿಯನ್ನು ನಿರ್ಮಿಸುವುದು ಶಿಕ್ಷಣದ ಉದ್ದೇಶವಾಗಬೇಕು. ಯುವಜನರು ನಿಸ್ವಾರ್ಥ ಮನೋಭಾವದಿಂದ ಸಮಾಜ ಸೇವೆಗೆ ಮುಂದಾಗಬೇಕು. ಈ ನಿಟ್ಟಿನಲ್ಲಿ ನಮ್ಮ ಶಿಕ್ಷಣ ಸಂಸ್ಥೆಗಳು ಶಿಕ್ಷಣ ವ್ಯವಸ್ಥೆಯನ್ನು ಪುನರರೂಪಿಸುವ ಅಗತ್ಯವಿದೆ’ ಎಂದು ಅಭಿಪ್ರಾಯಪಟ್ಟರು.