‘ಅರ್ಜುನ–ಶ್ರೀಕಾಂತ ಇಬ್ಬರೂ ಸ್ನೇಹಿತರಾಗಿದ್ದರು. ಶ್ರೀಕಾಂತ ಮಹಿಳೆಯೊಬ್ಬರ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಹಿನ್ನೆಲೆಯಲ್ಲಿ ಇವರಿಬ್ಬರ ನಡುವೆಯೂ ಗಲಾಟೆ ನಡೆದಿದೆ. ಜೆಸಿಬಿಯಲ್ಲಿ ಕುಳಿತಿದ್ದ ಶ್ರೀಕಾಂತಗೆ ಇಟ್ಟಿಗೆಯಿಂದ ತಲೆಗೆ ಹೊಡೆದಿದ್ದಾರೆ. ಕೆಳಗೆ ಬಿದ್ದ ಆತನಿಗೆ ಒದ್ದು, ಪಕ್ಕದಲ್ಲಿದ್ದ ದೊಡ್ಡ ಕಲ್ಲನ್ನು ತಲೆ ಮೇಲೆ ಎರಡು ಬಾರಿ ಎತ್ತಿ ಹಾಕಿ ಕೊಲೆ ಮಾಡಿ ಪರಾರಿಯಾಗಿದ್ದ. ಆರೋಪಿಯ ವಿಚಾರಣೆ ನಂತರ ಈ ಮಾಹಿತಿ ತಿಳಿದುಬಂದಿದೆ. ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ’ ಎಂದು ಎಸ್ಪಿ ಸುಧೀರ್ಕುಮಾರ್ ರೆಡ್ಡಿ ತಿಳಿಸಿದ್ದಾರೆ.