ಬೆಳಗಾವಿ: ‘ನೆರೆಯ ಮಹಾರಾಷ್ಟ್ರದ ಕಾಲೇಜುಗಳಲ್ಲಿ ವಿದ್ಯಾಭ್ಯಾಸಕ್ಕೆಂದು ತೆರಳುವ ರಾಜ್ಯದ ವಿದ್ಯಾರ್ಥಿಗಳಿಗೆ ‘ಬಾರ್ಡರ್ ಸರ್ಟಿಫಿಕೇಟ್’ ನೀಡಲು ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ. ಇದರಿಂದ, ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗುತ್ತಿದೆ. ಈ ಸಮಸ್ಯೆಯನ್ನು ಕೂಡಲೇ ಪರಿಹರಿಸಬೇಕು’ ಎಂದು ಆಗ್ರಹಿಸಿ ಸದಸ್ಯೆ ಸುಮಿತ್ರಾ ಉಗಳೆ ಸದನದ ಬಾವಿಗಿಳಿದು ಧರಣಿ ನಡೆಸಿದರು.