ಈ ಕುರಿತು ಪ್ರತಿಕ್ರಿಯಿಸಿದ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ‘ಅಧ್ಯಕ್ಷೆ ಜಿಲ್ಲಾ ಪಂಚಾಯ್ತಿಗೆ ಸರಿಯಾಗಿ ಬರುತ್ತಿಲ್ಲದಿರುವುದು ಗಮನಕ್ಕೆ ಬಂದಿದೆ. ಮೊಬೈಲ್ ಫೋನ್ ಸಂಪರ್ಕಕ್ಕೂ ಸಿಗುತ್ತಿಲ್ಲ ಎನ್ನುವುದು ಸದಸ್ಯರ ದೂರಾಗಿದೆ. ಹೀಗಾಗಿ, ಮುಂದೆ ಯಾವ ಕ್ರಮ ಕೈಗೊಳ್ಳಬೇಕು ಎನ್ನುವ ಕುರಿತು ಶೀಘ್ರವೇ ಪಕ್ಷದ ಸದಸ್ಯರ ಸಭೆ ಕರೆದು ತೀರ್ಮಾನಿಸಲಾಗುವುದು’ ಎಂದು ತಿಳಿಸಿದರು.