ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಭಿವೃದ್ಧಿ ಕಾರ್ಯಕ್ಕೆ ಸಹಕಾರ ಅಗತ್ಯ

Last Updated 22 ಸೆಪ್ಟೆಂಬರ್ 2011, 10:35 IST
ಅಕ್ಷರ ಗಾತ್ರ

ಧೂಪದಾಳ (ಗೋಕಾಕ): ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಸರ್ಕಾರ ಜಾರಿಗೊಳಿಸಿರುವ ಯೋಜನೆಗಳ ಪ್ರಯೋಜನ ಪಡೆದುಕೊಳ್ಳುವಂತೆ ಇಲ್ಲಿಯ ಗ್ರಾ.ಪಂ. ಅಧ್ಯಕ್ಷ ಸತ್ಯಪ್ರಕಾಶ ಮಲ್ಲಾಪೂರ ಸಲಹೆ ನೀಡಿದರು.
ಸೋಮವಾರ ಗ್ರಾಮದಲ್ಲಿ ಕೈಗೊಳ್ಳಲಾಗಿದ್ದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡುತ್ತಿದ್ದ ಅವರು, ಜನಪರ ಕೆಲಸಗಳು ಅನುಷ್ಠಾನಗೊಳ್ಳಲು ಜನರ ಸಹಕಾರವೂ ಅಗತ್ಯವಾಗಿದೆ ಎಂದರು.

ಜಿ.ಪಂ. ಸದಸ್ಯೆ ವಂದನಾ ಕತ್ತಿ ಅವರು ಮಾತನಾಡಿ, ಕೃಷಿ ಚಟುವಟಿಕೆಗಳಿಗೆ ತೊಂದರೆ ಆಗದಿರಲಿ ಎಂದು ಗ್ರಾಮೀಣ ಭಾಗದ ರಸ್ತೆಗಳ ದುರಸ್ತಿಗೆ ಆದ್ಯತೆ ನೀಡಲಾಗುತ್ತಿದೆ ಎಂದರು. 

ಈ ಸಂದರ್ಭದಲ್ಲಿ ತಾ.ಪಂ. ಸದಸ್ಯ ಲಕ್ಷ್ಮಣ ಗಾಡಿವಡ್ಡರ, ಗ್ರಾ.ಪಂ. ಸದಸ್ಯರಾದ ನೇಮಿನಾಥ ಬೊಮ್ಮನ್ನವರ ಮತ್ತು ಚೂಡಾಮಣಿ ಬೆಳವಿ, ಗ್ರಾಮದ ಹಿರಿಯರಾದ ಭೀಮಶಿ ದೇಮನ್ನವರ, ದೇವೇಂದ್ರ ನಾಗನ್ನವರ, ಶ್ರೀಮಂತ ಬೆಳವಿ, ಶಿವಲಿಂಗ ಪಾಟೀಲ, ಸುಭಾಷ ರಜಪೂತ, ಆದಪ್ಪಾ ಮಗದುಮ್, ಹಣಮಂತ ಗಾಡಿವಡ್ಡರ, ಇಮಮಸಾಬ ಬಳಿಗಾರ, ಹಣಮಂತ ವಗ್ಗರ, ಮದಾರಸಾಬ್ ಜಗದಾಳ ಉಪಸ್ಥಿತರಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT