ಬೆಳಗಾವಿ ವಿಭಾಗದ ವಿಜಾಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಉತ್ತರಕನ್ನಡ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿಂದ ಯುವ ಕಲಾವಿದರು ಪ್ರತಿಭೆ ಪ್ರದರ್ಶಿಸಲು ಉತ್ಸಾಹದಿಂದ ಇಲ್ಲಿಗೆ ಆಗಮಿಸಿದ್ದರು. ಆದರೆ ಸೂಕ್ತ ವಸತಿ ಸೌಕರ್ಯ ಕಲ್ಪಿಸದ ಕಾರಣ ಅವರು ಕಾರ್ಯಕ್ರಮ ನಡೆದ ಕುಮಾರಗಂಧರ್ವ ರಂಗಮಂದಿರದಲ್ಲಿಯೇ ರಾತ್ರಿ ಕಳೆಯಬೇಕಾಯಿತು.