<p><strong>ಬೆಳಗಾವಿ:</strong> ಪ್ರಸ್ತುತ ಬಿಜೆಪಿ ಭದ್ರಕೋಟೆಯಾಗಿರುವ ಕಾಗವಾಡ ವಿಧಾನಸಭಾ ಕ್ಷೇತ್ರವನ್ನು ಈ ಬಾರಿಯ ಚುನಾವಣೆಯಲ್ಲಿ ತನ್ನ ವಶ ಮಾಡಿಕೊಳ್ಳಲು ಕಾಂಗ್ರೆಸ್ ಪಕ್ಷ ತೀವ್ರ ಕಸರತ್ತು ನಡೆಸುತ್ತಿದೆ.</p>.<p>ಹಾಲಿ ಶಾಸಕ ಭರಮಗೌಡ (ರಾಜು) ಕಾಗೆ ಮತ್ತೊಮ್ಮೆ ಆಯ್ಕೆ ಬಯಸಿದ್ದಾರೆ. ಕಾಂಗ್ರೆಸ್ನಿಂದ ಶ್ರೀಮಂತ ಪಾಟೀಲ, ಜೆಡಿಎಸ್ನಿಂದ ಮಾಜಿ ಶಾಸಕ ಕಲ್ಲಪ್ಪ ಮಗೆಣ್ಣವರ ಸೇರಿದಂತೆ 14 ಮಂದಿ ಉಮೇದುವಾರರು ಕಣದಲ್ಲಿದ್ದಾರೆ.</p>.<p>ಮೇಲ್ನೋಟಕ್ಕೆ, ಬಿಜೆಪಿ–ಕಾಂಗ್ರೆಸ್ ನಡುವೆ ನೇರ ಹಣಾಹಣಿ ಕಂಡುಬಂದಿದೆ. ಕಾಂಗ್ರೆಸ್ ಮುಖಂಡರು, ಸಹೋದರರಾದ ರಮೇಶ ಜಾರಕಿಹೊಳಿ ಹಾಗೂ ಸತೀಶ ಜಾರಕಿಹೊಳಿ ‘ರಂಗಪ್ರವೇಶ’ ಮಾಡಿರುವುದು ಹಾಗೂ ಪ್ರಚಾರದಲ್ಲಿ ತೊಡಗಿರುವುದು ಕಾರ್ಯಕರ್ತರ ಉತ್ಸಾಹ ಹೆಚ್ಚಿಸಿದೆ.</p>.<p>5ನೇ ಗೆಲುವಿನತ್ತ ಚಿತ್ತ: 1999ರಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿ ಸೋತಿದ್ದ ಭರಮಗೌಡ ಅವರು, ಕಾಂಗ್ರೆಸ್ನ ಪಾಸಗೌಡ ಪಾಟೀಲ ನಿಧನದಿಂದಾಗಿ ತೆರವಾಗಿದ್ದ ಸ್ಥಾನಕ್ಕೆ 2000ದಲ್ಲಿ ನಡೆದ ಉಪಚುನಾವಣೆಯಲ್ಲಿ ಸಂಯುಕ್ತ ಜನತಾದಳದಿಂದ ಕಣಕ್ಕಿಳಿದು ಗೆಲುವು ಸಾಧಿಸಿದ್ದರು.</p>.<p>ನಂತರ 2004, 2008 ಹಾಗೂ 2013ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ‘ಹ್ಯಾಟ್ರಿಕ್ ಗೆಲುವಿನ’ ಸಾಧನೆಯನ್ನೂ ಮಾಡಿದ್ದಾರೆ. ಇವರಿಗೆ ಇಲ್ಲಿ ಯಾವುದೇ ಬಂಡಾಯದ ಬಿಸಿ ಇಲ್ಲ. ಪಕ್ಕದ ಕ್ಷೇತ್ರವಾದ ಅಥಣಿಯ ಲಕ್ಷ್ಮಣ ಸವದಿ ಕೂಡ ಬೆಂಬಲಕ್ಕೆ ನಿಂತಿದ್ದಾರೆ.</p>.<p>ಕಾಂಗ್ರೆಸ್ನಿಂದ ದಿಗ್ವಿಜಯ ಪವಾರ ದೇಸಾಯಿ ಮತ್ತು ಶ್ರೀಮಂತ ಪಾಟೀಲ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಾಗಿದ್ದರು. ದಿಗ್ವಿಜಯ, 2008ರಲ್ಲಿ ಕಾಂಗ್ರೆಸ್ನಿಂದ ಸ್ಪರ್ಧಿಸಿ ಸೋತಿದ್ದರು.</p>.<p>ಕಾಂಗ್ರೆಸ್ ಟಿಕೆಟ್ ದೊರೆಯದೆ ಬೇಸರಗೊಂಡಿದ್ದ ಶ್ರೀಮಂತ ಪಾಟೀಲ ಜೆಡಿಎಸ್ನಿಂದ ಸ್ಪರ್ಧಿಸಿದ್ದರು. ಇದರಿಂದ ಮತಗಳು ಹಂಚಿಹೋಗಿದ್ದವು. 2013ರಲ್ಲಿ ಜೆಡಿಎಸ್ನಿಂದಲೇ ಸ್ಪರ್ಧಿಸಿದ್ದ ಶ್ರೀಮಂತ, ಈ ಬಾರಿ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಆ ಪಕ್ಷದ ಉಮೇದುವಾರರೂ ಆಗಿದ್ದಾರೆ.</p>.<p><strong>ಅನುಕೂಲವೋ, ಪ್ರತಿಕೂಲವೋ?: </strong>ಕೆಂಪವಾಡ ಸಕ್ಕರೆ ಕಾರ್ಖಾನೆ ಅಧ್ಯಕ್ಷರಾಗಿರುವ ಅವರು ಒಮ್ಮೆ ಕಾಂಗ್ರೆಸ್ನ ಪ್ರಕಾಶ ಹುಕ್ಕೇರಿ ವಿರುದ್ಧ ಲೋಕಸಭೆ ಚುನಾವಣೆಯಲ್ಲೂ ಸ್ಪರ್ಧಿಸಿ ಸೋಲನುಭವಿಸಿದ್ದರು. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಅವರನ್ನು ಗೆಲ್ಲಿಸುವುದಕ್ಕಾಗಿ ಕಾಂಗ್ರೆಸ್ ಮುಖಂಡರು ಹರಸಾಹಸ ಪಡುತ್ತಿದ್ದಾರೆ. ಪಕ್ಷ ಬದಲಾಯಿಸಿರುವ ಬೆಳವಣಿಗೆಯಿಂದ ಅವರಿಗೆ ಯಾವ ರೀತಿಯ ‘ಅನುಕೂಲ’ ಆಗುತ್ತದೆ ಎನ್ನುವುದು ಕುತೂಹಲ ಮೂಡಿಸಿದೆ.</p>.<p>ಸಕ್ಕರೆ ಕಾರ್ಖಾನೆಯಿಂದ ಕೈಗೊಂಡಿರುವ ಸೇವಾ ಕಾರ್ಯಕ್ರಮಗಳು ನೆರವಿಗೆ ಬರಲಿವೆ ಎನ್ನುವ ನಿರೀಕ್ಷೆ ಅವರದು. ಅವರಿಗೆ ಆರಂಭದಲ್ಲಿ ಬಂಡಾಯದ ಬಿಸಿ ಎದುರಾಗಿತ್ತು. ನಂತರ ಎಲ್ಲರವೂ ಸರಿ ಹೋದಂತೆ ಕಂಡರೂ ಅತೃಪ್ತರ ಸಿಟ್ಟು ಕಡಿಮೆಯಾಗಿಲ್ಲ ಎಂದು ವಿಶ್ಲೇಷಿಸಲಾಗುತ್ತಿದೆ.</p>.<p>ಹಿಂದೆ ಕಾಂಗ್ರೆಸ್ನಲ್ಲಿದ್ದ ಕಲ್ಲಪ್ಪ ಮಗೆಣ್ಣವರ ಈ ಬಾರಿ ಜೆಡಿಎಸ್ ಉಮೇದುವಾರರಾಗಿದ್ದಾರೆ. ಆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಜಾರಿಗೊಳಿಸಿದ್ದ ಕಾರ್ಯಕ್ರಮಗಳು ಕೈಹಿಡಿಯಲಿವೆ ಎಂದು ನೆಚ್ಚಿಕೊಂಡಿದ್ದಾರೆ. ಬಿಎಸ್ಪಿ ಬೆಂಬಲವೂ ಅವರಿಗಿದೆ.</p>.<p>ಕ್ಷೇತ್ರದ ಬಹುತೇಕ ಸ್ಥಳೀಯ ಸಂಸ್ಥೆಗಳ ಮೇಲೆ ತಮ್ಮ ಹಿಡಿತ ಸಾಧಿಸಿರುವ ಕಾಗೆ, ‘ಈ ಬಾರಿ ಕಾಂಗ್ರೆಸ್ ಗೆದ್ದರೆ ಅವರ ಮನೆಯಲ್ಲಿ ಚಾಕರಿ ಮಾಡುತ್ತೇನೆ’ ಎಂದು ಬಹಿರಂಗ ಸವಾಲು ಹಾಕಿದ್ದಾರೆ. ಇದರಿಂದಾಗಿ, ಈ ಬಾರಿ ಇಲ್ಲಿ ಕಾಗೆ ಹಾಗೂ ಜಾರಕಿಹೊಳಿ ಸಹೋದರರ ನಡುವಿನ ಸ್ಪರ್ಧೆಯಂತೆಯೇ ಕಂಡುಬರುತ್ತಿದೆ. ಎರಡೂ ಪಕ್ಷಗಳ ಕಾರ್ಯಕರ್ತರ ‘ವಲಸೆ ಕಾರ್ಯಕ್ರಮ’ ಜೋರಾಗಿಯೇ ನಡೆಯುತ್ತಿದೆ.</p>.<p><strong>ಮತದಾರರ ವಿವರ</strong></p>.<p>ಪುರುಷರು 92,223</p>.<p>ಮಹಿಳೆಯರು 85,825</p>.<p>ಒಟ್ಟು 1,78,048</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಪ್ರಸ್ತುತ ಬಿಜೆಪಿ ಭದ್ರಕೋಟೆಯಾಗಿರುವ ಕಾಗವಾಡ ವಿಧಾನಸಭಾ ಕ್ಷೇತ್ರವನ್ನು ಈ ಬಾರಿಯ ಚುನಾವಣೆಯಲ್ಲಿ ತನ್ನ ವಶ ಮಾಡಿಕೊಳ್ಳಲು ಕಾಂಗ್ರೆಸ್ ಪಕ್ಷ ತೀವ್ರ ಕಸರತ್ತು ನಡೆಸುತ್ತಿದೆ.</p>.<p>ಹಾಲಿ ಶಾಸಕ ಭರಮಗೌಡ (ರಾಜು) ಕಾಗೆ ಮತ್ತೊಮ್ಮೆ ಆಯ್ಕೆ ಬಯಸಿದ್ದಾರೆ. ಕಾಂಗ್ರೆಸ್ನಿಂದ ಶ್ರೀಮಂತ ಪಾಟೀಲ, ಜೆಡಿಎಸ್ನಿಂದ ಮಾಜಿ ಶಾಸಕ ಕಲ್ಲಪ್ಪ ಮಗೆಣ್ಣವರ ಸೇರಿದಂತೆ 14 ಮಂದಿ ಉಮೇದುವಾರರು ಕಣದಲ್ಲಿದ್ದಾರೆ.</p>.<p>ಮೇಲ್ನೋಟಕ್ಕೆ, ಬಿಜೆಪಿ–ಕಾಂಗ್ರೆಸ್ ನಡುವೆ ನೇರ ಹಣಾಹಣಿ ಕಂಡುಬಂದಿದೆ. ಕಾಂಗ್ರೆಸ್ ಮುಖಂಡರು, ಸಹೋದರರಾದ ರಮೇಶ ಜಾರಕಿಹೊಳಿ ಹಾಗೂ ಸತೀಶ ಜಾರಕಿಹೊಳಿ ‘ರಂಗಪ್ರವೇಶ’ ಮಾಡಿರುವುದು ಹಾಗೂ ಪ್ರಚಾರದಲ್ಲಿ ತೊಡಗಿರುವುದು ಕಾರ್ಯಕರ್ತರ ಉತ್ಸಾಹ ಹೆಚ್ಚಿಸಿದೆ.</p>.<p>5ನೇ ಗೆಲುವಿನತ್ತ ಚಿತ್ತ: 1999ರಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿ ಸೋತಿದ್ದ ಭರಮಗೌಡ ಅವರು, ಕಾಂಗ್ರೆಸ್ನ ಪಾಸಗೌಡ ಪಾಟೀಲ ನಿಧನದಿಂದಾಗಿ ತೆರವಾಗಿದ್ದ ಸ್ಥಾನಕ್ಕೆ 2000ದಲ್ಲಿ ನಡೆದ ಉಪಚುನಾವಣೆಯಲ್ಲಿ ಸಂಯುಕ್ತ ಜನತಾದಳದಿಂದ ಕಣಕ್ಕಿಳಿದು ಗೆಲುವು ಸಾಧಿಸಿದ್ದರು.</p>.<p>ನಂತರ 2004, 2008 ಹಾಗೂ 2013ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ‘ಹ್ಯಾಟ್ರಿಕ್ ಗೆಲುವಿನ’ ಸಾಧನೆಯನ್ನೂ ಮಾಡಿದ್ದಾರೆ. ಇವರಿಗೆ ಇಲ್ಲಿ ಯಾವುದೇ ಬಂಡಾಯದ ಬಿಸಿ ಇಲ್ಲ. ಪಕ್ಕದ ಕ್ಷೇತ್ರವಾದ ಅಥಣಿಯ ಲಕ್ಷ್ಮಣ ಸವದಿ ಕೂಡ ಬೆಂಬಲಕ್ಕೆ ನಿಂತಿದ್ದಾರೆ.</p>.<p>ಕಾಂಗ್ರೆಸ್ನಿಂದ ದಿಗ್ವಿಜಯ ಪವಾರ ದೇಸಾಯಿ ಮತ್ತು ಶ್ರೀಮಂತ ಪಾಟೀಲ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಾಗಿದ್ದರು. ದಿಗ್ವಿಜಯ, 2008ರಲ್ಲಿ ಕಾಂಗ್ರೆಸ್ನಿಂದ ಸ್ಪರ್ಧಿಸಿ ಸೋತಿದ್ದರು.</p>.<p>ಕಾಂಗ್ರೆಸ್ ಟಿಕೆಟ್ ದೊರೆಯದೆ ಬೇಸರಗೊಂಡಿದ್ದ ಶ್ರೀಮಂತ ಪಾಟೀಲ ಜೆಡಿಎಸ್ನಿಂದ ಸ್ಪರ್ಧಿಸಿದ್ದರು. ಇದರಿಂದ ಮತಗಳು ಹಂಚಿಹೋಗಿದ್ದವು. 2013ರಲ್ಲಿ ಜೆಡಿಎಸ್ನಿಂದಲೇ ಸ್ಪರ್ಧಿಸಿದ್ದ ಶ್ರೀಮಂತ, ಈ ಬಾರಿ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಆ ಪಕ್ಷದ ಉಮೇದುವಾರರೂ ಆಗಿದ್ದಾರೆ.</p>.<p><strong>ಅನುಕೂಲವೋ, ಪ್ರತಿಕೂಲವೋ?: </strong>ಕೆಂಪವಾಡ ಸಕ್ಕರೆ ಕಾರ್ಖಾನೆ ಅಧ್ಯಕ್ಷರಾಗಿರುವ ಅವರು ಒಮ್ಮೆ ಕಾಂಗ್ರೆಸ್ನ ಪ್ರಕಾಶ ಹುಕ್ಕೇರಿ ವಿರುದ್ಧ ಲೋಕಸಭೆ ಚುನಾವಣೆಯಲ್ಲೂ ಸ್ಪರ್ಧಿಸಿ ಸೋಲನುಭವಿಸಿದ್ದರು. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಅವರನ್ನು ಗೆಲ್ಲಿಸುವುದಕ್ಕಾಗಿ ಕಾಂಗ್ರೆಸ್ ಮುಖಂಡರು ಹರಸಾಹಸ ಪಡುತ್ತಿದ್ದಾರೆ. ಪಕ್ಷ ಬದಲಾಯಿಸಿರುವ ಬೆಳವಣಿಗೆಯಿಂದ ಅವರಿಗೆ ಯಾವ ರೀತಿಯ ‘ಅನುಕೂಲ’ ಆಗುತ್ತದೆ ಎನ್ನುವುದು ಕುತೂಹಲ ಮೂಡಿಸಿದೆ.</p>.<p>ಸಕ್ಕರೆ ಕಾರ್ಖಾನೆಯಿಂದ ಕೈಗೊಂಡಿರುವ ಸೇವಾ ಕಾರ್ಯಕ್ರಮಗಳು ನೆರವಿಗೆ ಬರಲಿವೆ ಎನ್ನುವ ನಿರೀಕ್ಷೆ ಅವರದು. ಅವರಿಗೆ ಆರಂಭದಲ್ಲಿ ಬಂಡಾಯದ ಬಿಸಿ ಎದುರಾಗಿತ್ತು. ನಂತರ ಎಲ್ಲರವೂ ಸರಿ ಹೋದಂತೆ ಕಂಡರೂ ಅತೃಪ್ತರ ಸಿಟ್ಟು ಕಡಿಮೆಯಾಗಿಲ್ಲ ಎಂದು ವಿಶ್ಲೇಷಿಸಲಾಗುತ್ತಿದೆ.</p>.<p>ಹಿಂದೆ ಕಾಂಗ್ರೆಸ್ನಲ್ಲಿದ್ದ ಕಲ್ಲಪ್ಪ ಮಗೆಣ್ಣವರ ಈ ಬಾರಿ ಜೆಡಿಎಸ್ ಉಮೇದುವಾರರಾಗಿದ್ದಾರೆ. ಆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಜಾರಿಗೊಳಿಸಿದ್ದ ಕಾರ್ಯಕ್ರಮಗಳು ಕೈಹಿಡಿಯಲಿವೆ ಎಂದು ನೆಚ್ಚಿಕೊಂಡಿದ್ದಾರೆ. ಬಿಎಸ್ಪಿ ಬೆಂಬಲವೂ ಅವರಿಗಿದೆ.</p>.<p>ಕ್ಷೇತ್ರದ ಬಹುತೇಕ ಸ್ಥಳೀಯ ಸಂಸ್ಥೆಗಳ ಮೇಲೆ ತಮ್ಮ ಹಿಡಿತ ಸಾಧಿಸಿರುವ ಕಾಗೆ, ‘ಈ ಬಾರಿ ಕಾಂಗ್ರೆಸ್ ಗೆದ್ದರೆ ಅವರ ಮನೆಯಲ್ಲಿ ಚಾಕರಿ ಮಾಡುತ್ತೇನೆ’ ಎಂದು ಬಹಿರಂಗ ಸವಾಲು ಹಾಕಿದ್ದಾರೆ. ಇದರಿಂದಾಗಿ, ಈ ಬಾರಿ ಇಲ್ಲಿ ಕಾಗೆ ಹಾಗೂ ಜಾರಕಿಹೊಳಿ ಸಹೋದರರ ನಡುವಿನ ಸ್ಪರ್ಧೆಯಂತೆಯೇ ಕಂಡುಬರುತ್ತಿದೆ. ಎರಡೂ ಪಕ್ಷಗಳ ಕಾರ್ಯಕರ್ತರ ‘ವಲಸೆ ಕಾರ್ಯಕ್ರಮ’ ಜೋರಾಗಿಯೇ ನಡೆಯುತ್ತಿದೆ.</p>.<p><strong>ಮತದಾರರ ವಿವರ</strong></p>.<p>ಪುರುಷರು 92,223</p>.<p>ಮಹಿಳೆಯರು 85,825</p>.<p>ಒಟ್ಟು 1,78,048</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>