ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೀಟನಾಶಕ ಬಳಕೆ: 4 ಲಕ್ಷ ಮೌಲ್ಯದ ಬೆಳೆಹಾನಿ

Last Updated 14 ಜುಲೈ 2013, 7:07 IST
ಅಕ್ಷರ ಗಾತ್ರ

ಬೆಳಗಾವಿ: ತಾಲ್ಲೂಕಿನ ಮಾರೀಹಾಳ ಗ್ರಾಮದ ರೈತ ಈರಪ್ಪ ಪಾಟೀಲ ಅವರು ತಮ್ಮ 1 ಎಕರೆ 19 ಗುಂಟೆ ಕೃಷಿ ಜಮೀನಿನಲ್ಲಿ ಸಿಂಪಡಿಸಿದ ಕೀಟನಾಶಕದಿಂದಾಗಿ ಕ್ಯಾಬೇಜ್ ಹಾಗೂ ಬಿನ್ಸ್ ಬೆಳೆಗಳು ಹಾಳಾಗಿದ್ದು, ಸುಮಾರು 4 ಲಕ್ಷ ರೂಪಾಯಿ ನಷ್ಟ ಉಂಟಾಗಿದೆ.

ಈರಪ್ಪ ಪಾಟೀಲ ಅವರು ಬೆಳೆದ ಕ್ಯಾಬೇಜ್ ಹಾಗೂ ಬಿನ್ಸ್ ಬೆಳೆಗಳು ಕಟಾವಿನ ಹಂತದಲ್ಲಿದ್ದಾಗ ಸ್ಥಳೀಯ ಔಷಧಿ ಮಾರಾಟಗಾರರಾದ ಬಸವೇಶ್ವರ ಅಗ್ರೋ ಕೇಂದ್ರದ ಮಾಲೀಕರ ಸಲಹೆಯ ಮೇರೆಗೆ ಇಂಡೋಫೆಲ್ 2.78 ಪೇಡರ್ ಮತ್ತು ಹೈದರಾಬಾದ್ ಮೂಲದ ಕೆಂಟೂ ಎಂಬ ಕೀಟನಾಶಕ ಸಿಂಪರಣೆ ಮಾಡಲಾಗಿದೆ. ಆದರೆ, ಇದು ನಕಲಿ ಆಗಿರುವುದರಿಂದ ಬೆಳೆ ಸಂಪೂರ್ಣ ಹಾಳಾಗಿದೆ. ಹೀಗಾಗಿ ರೈತರ ಜಮೀನಿಗೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಹಾಗೂ ತಾಲ್ಲೂಕು ಕೃಷಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿ, ನಕಲಿ ಔಷಧ ಕಂಪೆನಿಗಳು ಹಾಗೂ ನಕಲಿ ಔಷಧ ಮಾರಾಟಗಾರರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು. ರೈತನಿಗೆ ಸೂಕ್ತ ಪರಿಹಾರವನ್ನು ಸರ್ಕಾರ ನೀಡಬೇಕು ಎಂದು ಭಾರತೀಯ ಕೃಷಿಕ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಸಿದಗೌಡ ಮೋದಗಿ ಒತ್ತಾಯಿಸಿದ್ದಾರೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT