<p><strong>ಬೆಳಗಾವಿ:</strong> ಯಾವುದೇ ಅನುಮತಿ ಪಡೆಯದೇ ಬಸ್ ನಿಲ್ದಾಣ ನಿರ್ಮಿಸಿಕೊಂಡು ಕಾರ್ಯನಿರ್ವಹಿಸುತ್ತಿದ್ದ ಖಾಸಗಿ ಬಸ್ ನಿಲ್ದಾಣ ಹಾಗೂ ಅದರ ಸುತ್ತಲೂ ಅನಧಿಕೃತವಾಗಿ ತಲೆ ಎತ್ತಿದ್ದ ಡಬ್ಬಾ ಅಂಗಡಿಗಳನ್ನು ಮಹಾನಗರ ಪಾಲಿಕೆ ಸಿಬ್ಬಂದಿ ಶುಕ್ರವಾರ ಜೆಸಿಬಿ ಯಂತ್ರಗಳಿಂದ ತೆರವುಗೊಳಿಸಿದರು.<br /> <br /> ಕಳೆದ 3 ವರ್ಷಗಳಿಂದ ಈ ಬಸ್ ನಿಲ್ದಾಣ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಬಸ್ ನಿಲ್ದಾಣದಲ್ಲಿ ಬೆಳಿಗ್ಗೆ 7 ಗಂಟೆಗೆ ತೆರವು ಕಾರ್ಯಾಚರಣೆ ಆರಂಭಿಸಿದ ಪಾಲಿಕೆ ಸಿಬ್ಬಂದಿ, ಬಸ್ ನಿಲ್ದಾಣದ ಸುತ್ತಲೂ ಇದ್ದ ಎಲ್ಲ ಅಂಗಡಿಗಳನ್ನು ತೆರವುಗೊಳಿಸಿದರು.<br /> <br /> ಖಾಸಗಿ ಬಸ್ ನಿಲ್ದಾಣವು ಯಾವುದೇ ಅಧಿಕೃತ ಅನುಮತಿ ಪಡೆದಿಲ್ಲ. ಆದ್ದರಿಂದ ಕೂಡಲೇ ತೆರವುಗೊಳಿಸಬೇಕು ಎಂದು ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಪಾಲಿಕೆಗೆ ದೂರು ಸಲ್ಲಿಸಿದ್ದರು. ಈ ದೂರಿನನ್ವಯ ತೆರವುಗೊಳಿಸಲಾಗಿದೆ.<br /> <br /> ಒಮ್ಮಿಂದೊಮ್ಮೆಲೆ ಪಾಲಿಕೆ ಸಿಬ್ಬಂದಿ ಜೆಸಿಬಿ ಯಂತ್ರಗಳೊಂದಿಗೆ ಆಗಮಿಸಿ ತೆರವು ಗೊಳಿಸಲು ಮುಂದಾಗುತ್ತಿದ್ದಂತೆ ಅಂಗಡಿಕಾರರು ಆಕ್ರೋಶ ವ್ಯಕ್ತಪಡಿಸಿದರು. ತೆರವು ಕಾರ್ಯಾಚರಣೆಗೆ ಅಡ್ಡಿಪಡಿಸಲು ಮುಂದಾದರು. ಪೊಲೀಸರು ಮಧ್ಯ ಪ್ರವೇಶಿಸಿದ್ದರಿಂದ ತೆರವು ಕಾರ್ಯಾಚರಣೆ ಸುಗಮವಾಗಿ ಸಾಗಿತು.<br /> <br /> ತೆರವು ಕಾರ್ಯಾಚರಣೆಯಿಂದ ಚಹಾದ ಡಬ್ಬಾ ಅಂಗಡಿಗಳ ಸಾಮಗ್ರಿಗಳು ಅಲ್ಲಿಯೇ ಬಿದ್ದಿದ್ದವು. ಸುಮಾರು ನಾಲ್ಕು ತಾಸುಗಳವರೆಗೆ ತೆರವು ಕಾರ್ಯಾಚರಣೆ ನಡೆಯಿತು. ಎಲ್ಲ ಅಂಗಡಿಗಳನ್ನು ತೆರವುಗೊಳಿಸಿದ ನಂತರ ಅವುಗಳ ಮಾಲೀಕರು ಸಾಮಗ್ರಿಗಳನ್ನು ತೆಗೆದುಕೊಂಡರು.<br /> <br /> `ಖಾಸಗಿ ಜಾಗೆಯಲ್ಲಿ ಬಸ್ ನಿಲ್ದಾಣ ಇದೆ. ಕಳೆದ 3 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದೆ. ಎಂಟು ದಿನಗಳ ಹಿಂದೆ ಪಾಲಿಕೆಯವರು ನೋಟಿಸ್ ನೀಡಿದ್ದರು. ಆದರೆ, ಗುರುವಾರ (ಜು.11) ಸಂಜೆ ಆಗಮಿಸಿ ಇಂದು ಬೆಳಿಗ್ಗೆ ತೆರವುಗೊಳಿಸುವುದಾಗಿ ಹೇಳಿದರು. ಈ ಬಗ್ಗೆ ನಮ್ಮ ಮಾಲೀಕರು ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದಾರೆ' ಎಂದು ಖಾಸಗಿ ಬಸ್ ಸಂಸ್ಥೆಯ ವ್ಯವಸ್ಥಾಪಕ ಎಸ್.ಬಿ.ಚವ್ಹಾಣ `ಪ್ರಜಾವಾಣಿ'ಗೆ ತಿಳಿಸಿದರು.<br /> <br /> `ಅನಧಿಕೃತವಾಗಿ ಬಸ್ ನಿಲ್ದಾಣ ನಿರ್ಮಾಣವಾಗಿತ್ತು. ಈ ನಿಲ್ದಾಣದ ಸುತ್ತಲೂ ಡಬ್ಬಾ ಅಂಗಡಿಗಳು ತಲೆ ಎತ್ತಿದ್ದರಿಂದ ನಗರದ ಸೌಂದರ್ಯ ಹಾಳಾಗಿತ್ತು. ಇದಲ್ಲದೇ ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರೂ ಸಹ ದೂರು ನೀಡಿದ್ದರು. ಆದ್ದರಿಂದ ತೆರವುಗೊಳಿಸಲಾಯಿತು' ಎಂದು ಪಾಲಿಕೆಯ ನಗರ ಯೋಜನೆ ಅಧಿಕಾರಿ ಎ.ಎಸ್.ಕಾಂಬಳೆ `ಪ್ರಜಾವಾಣಿ'ಗೆ ತಿಳಿಸಿದರು.<br /> <br /> `ಜಾಗೆಯ ಮಾಲೀಕರಿಗೆ 20 ದಿನಗಳ ಹಿಂದೆಯೇ ನೋಟೀಸು ನೀಡಲಾಗಿತ್ತು. ಒಟ್ಟು ಮೂರು ನೋಟೀಸುಗಳನ್ನು ನೀಡಲಾಗಿದೆ. ಆದರೂ ಸಹ ಅವರು ತೆರವುಗೊಳಿಸಿರಲಿಲ್ಲ. ಹಿಂದೆ ನೋಟೀಸು ನೀಡಿದ ಸಂದರ್ಭದಲ್ಲಿ ಖಾಸಗಿ ಬಸ್ ಸಂಸ್ಥೆಯವರು ನ್ಯಾಯಾಲಯದಿಂದ ತಡೆಯಾಜ್ಞೆ ಪಡೆದಿದ್ದರು' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಯಾವುದೇ ಅನುಮತಿ ಪಡೆಯದೇ ಬಸ್ ನಿಲ್ದಾಣ ನಿರ್ಮಿಸಿಕೊಂಡು ಕಾರ್ಯನಿರ್ವಹಿಸುತ್ತಿದ್ದ ಖಾಸಗಿ ಬಸ್ ನಿಲ್ದಾಣ ಹಾಗೂ ಅದರ ಸುತ್ತಲೂ ಅನಧಿಕೃತವಾಗಿ ತಲೆ ಎತ್ತಿದ್ದ ಡಬ್ಬಾ ಅಂಗಡಿಗಳನ್ನು ಮಹಾನಗರ ಪಾಲಿಕೆ ಸಿಬ್ಬಂದಿ ಶುಕ್ರವಾರ ಜೆಸಿಬಿ ಯಂತ್ರಗಳಿಂದ ತೆರವುಗೊಳಿಸಿದರು.<br /> <br /> ಕಳೆದ 3 ವರ್ಷಗಳಿಂದ ಈ ಬಸ್ ನಿಲ್ದಾಣ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಬಸ್ ನಿಲ್ದಾಣದಲ್ಲಿ ಬೆಳಿಗ್ಗೆ 7 ಗಂಟೆಗೆ ತೆರವು ಕಾರ್ಯಾಚರಣೆ ಆರಂಭಿಸಿದ ಪಾಲಿಕೆ ಸಿಬ್ಬಂದಿ, ಬಸ್ ನಿಲ್ದಾಣದ ಸುತ್ತಲೂ ಇದ್ದ ಎಲ್ಲ ಅಂಗಡಿಗಳನ್ನು ತೆರವುಗೊಳಿಸಿದರು.<br /> <br /> ಖಾಸಗಿ ಬಸ್ ನಿಲ್ದಾಣವು ಯಾವುದೇ ಅಧಿಕೃತ ಅನುಮತಿ ಪಡೆದಿಲ್ಲ. ಆದ್ದರಿಂದ ಕೂಡಲೇ ತೆರವುಗೊಳಿಸಬೇಕು ಎಂದು ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಪಾಲಿಕೆಗೆ ದೂರು ಸಲ್ಲಿಸಿದ್ದರು. ಈ ದೂರಿನನ್ವಯ ತೆರವುಗೊಳಿಸಲಾಗಿದೆ.<br /> <br /> ಒಮ್ಮಿಂದೊಮ್ಮೆಲೆ ಪಾಲಿಕೆ ಸಿಬ್ಬಂದಿ ಜೆಸಿಬಿ ಯಂತ್ರಗಳೊಂದಿಗೆ ಆಗಮಿಸಿ ತೆರವು ಗೊಳಿಸಲು ಮುಂದಾಗುತ್ತಿದ್ದಂತೆ ಅಂಗಡಿಕಾರರು ಆಕ್ರೋಶ ವ್ಯಕ್ತಪಡಿಸಿದರು. ತೆರವು ಕಾರ್ಯಾಚರಣೆಗೆ ಅಡ್ಡಿಪಡಿಸಲು ಮುಂದಾದರು. ಪೊಲೀಸರು ಮಧ್ಯ ಪ್ರವೇಶಿಸಿದ್ದರಿಂದ ತೆರವು ಕಾರ್ಯಾಚರಣೆ ಸುಗಮವಾಗಿ ಸಾಗಿತು.<br /> <br /> ತೆರವು ಕಾರ್ಯಾಚರಣೆಯಿಂದ ಚಹಾದ ಡಬ್ಬಾ ಅಂಗಡಿಗಳ ಸಾಮಗ್ರಿಗಳು ಅಲ್ಲಿಯೇ ಬಿದ್ದಿದ್ದವು. ಸುಮಾರು ನಾಲ್ಕು ತಾಸುಗಳವರೆಗೆ ತೆರವು ಕಾರ್ಯಾಚರಣೆ ನಡೆಯಿತು. ಎಲ್ಲ ಅಂಗಡಿಗಳನ್ನು ತೆರವುಗೊಳಿಸಿದ ನಂತರ ಅವುಗಳ ಮಾಲೀಕರು ಸಾಮಗ್ರಿಗಳನ್ನು ತೆಗೆದುಕೊಂಡರು.<br /> <br /> `ಖಾಸಗಿ ಜಾಗೆಯಲ್ಲಿ ಬಸ್ ನಿಲ್ದಾಣ ಇದೆ. ಕಳೆದ 3 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದೆ. ಎಂಟು ದಿನಗಳ ಹಿಂದೆ ಪಾಲಿಕೆಯವರು ನೋಟಿಸ್ ನೀಡಿದ್ದರು. ಆದರೆ, ಗುರುವಾರ (ಜು.11) ಸಂಜೆ ಆಗಮಿಸಿ ಇಂದು ಬೆಳಿಗ್ಗೆ ತೆರವುಗೊಳಿಸುವುದಾಗಿ ಹೇಳಿದರು. ಈ ಬಗ್ಗೆ ನಮ್ಮ ಮಾಲೀಕರು ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದಾರೆ' ಎಂದು ಖಾಸಗಿ ಬಸ್ ಸಂಸ್ಥೆಯ ವ್ಯವಸ್ಥಾಪಕ ಎಸ್.ಬಿ.ಚವ್ಹಾಣ `ಪ್ರಜಾವಾಣಿ'ಗೆ ತಿಳಿಸಿದರು.<br /> <br /> `ಅನಧಿಕೃತವಾಗಿ ಬಸ್ ನಿಲ್ದಾಣ ನಿರ್ಮಾಣವಾಗಿತ್ತು. ಈ ನಿಲ್ದಾಣದ ಸುತ್ತಲೂ ಡಬ್ಬಾ ಅಂಗಡಿಗಳು ತಲೆ ಎತ್ತಿದ್ದರಿಂದ ನಗರದ ಸೌಂದರ್ಯ ಹಾಳಾಗಿತ್ತು. ಇದಲ್ಲದೇ ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರೂ ಸಹ ದೂರು ನೀಡಿದ್ದರು. ಆದ್ದರಿಂದ ತೆರವುಗೊಳಿಸಲಾಯಿತು' ಎಂದು ಪಾಲಿಕೆಯ ನಗರ ಯೋಜನೆ ಅಧಿಕಾರಿ ಎ.ಎಸ್.ಕಾಂಬಳೆ `ಪ್ರಜಾವಾಣಿ'ಗೆ ತಿಳಿಸಿದರು.<br /> <br /> `ಜಾಗೆಯ ಮಾಲೀಕರಿಗೆ 20 ದಿನಗಳ ಹಿಂದೆಯೇ ನೋಟೀಸು ನೀಡಲಾಗಿತ್ತು. ಒಟ್ಟು ಮೂರು ನೋಟೀಸುಗಳನ್ನು ನೀಡಲಾಗಿದೆ. ಆದರೂ ಸಹ ಅವರು ತೆರವುಗೊಳಿಸಿರಲಿಲ್ಲ. ಹಿಂದೆ ನೋಟೀಸು ನೀಡಿದ ಸಂದರ್ಭದಲ್ಲಿ ಖಾಸಗಿ ಬಸ್ ಸಂಸ್ಥೆಯವರು ನ್ಯಾಯಾಲಯದಿಂದ ತಡೆಯಾಜ್ಞೆ ಪಡೆದಿದ್ದರು' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>