‘ಕರ್ನಾಟಕ ಸರ್ಕಾರ ಗಡಿ ಭಾಗದ ಮರಾಠಿಗರಿಗೆ ಅನ್ಯಾಯ ಮಾಡುತ್ತಿದೆ. ಮಹದಾಯಿ ವಿಚಾರದಲ್ಲಿ ಕರ್ನಾಟಕ ಸರ್ಕಾರದ ಮೂಗು ಹಿಡಿದು, ಬಾಯಿ ತೆಗೆಯಿಸಬೇಕಾಗಿದೆ. ಅದಕ್ಕೆ ಪಾಠ ಕಲಿಸಬೇಕು’ ಎಂದು ಸಂಘಟನೆ ಕೋರಿಕೊಂಡಿದೆ.ಮಹಾಜನ ಆಯೋಗದ ವರದಿಯ ಪ್ರಕಾರ ಕಳಸಾ ಬಂಡೂರಿ ನಾಲಾ ಪ್ರದೇಶವು ಮಹಾರಾಷ್ಟ್ರಕ್ಕೆ ಸೇರುತ್ತದೆ. ಕರ್ನಾಟಕ ಸರ್ಕಾರ ಈ ಪ್ರದೇಶದಲ್ಲಿ ನಾಲೆ ಅಗೆದು ಅಲ್ಲಿನ ದೇವಸ್ಥಾನಕ್ಕೆ ಧಕ್ಕೆ ಮಾಡಿದೆ ಎಂದು ಸಂಘಟನೆಯು ಆರೋಪಿಸಿದೆ.