<p>ಬೆಳಗಾವಿ: ರಾಜ್ಯ ಸರ್ಕಾರ ಗುಟ್ಕಾ ನಿಷೇಧಿಸಿದ ಹಿನ್ನಲೆಯಲ್ಲಿ ಆರೋಗ್ಯ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಇಲ್ಲಿನ ಕಚೇರಿ ರಸ್ತೆಯ ಪಾನ್- ಬೀಡಿ ಅಂಗಡಿಗಳ ಮೇಲೆ ಬುಧವಾರ ದಾಳಿ ನಡೆಸಿ ಗುಟ್ಕಾ ಚೀಟಿಗಳನ್ನು ನಾಶಪಡಿಸಿದರು.<br /> <br /> ಜಿಲ್ಲಾ ಆರೋಗ್ಯಾಧಿಕಾರಿ ದಿಲೀಪಕುಮಾರ ಮುನೋಳಿ ನೇತೃತ್ವದ ಅಧಿಕಾರಿಗಳ ತಂಡ ಕಚೇರಿ ರಸ್ತೆಯ ಆರು ಪಾನ್- ಬೀಡಿ ಅಂಗಡಿಗಳ ಮೇಲೆ ದಾಳಿ ನಡೆಸಿತು. ಗುಟ್ಕಾ ಚೀಟಿಗಳನ್ನು ವಶಪಡಿಸಿಕೊಂಡ ಅಧಿಕಾರಿಗಳು, ಅವುಗಳಿಗೆ ಬೆಂಕಿ ಹಚ್ಚಿ ಸುಟ್ಟುಹಾಕಿದರು. ಗುಟ್ಕಾ ಮಾರಾಟ ನಿಷೇಧಿಸಲಾಗಿದ್ದು, ಅವುಗಳನ್ನು ಸಂಗ್ರಹಿಸಿಟ್ಟುಕೊಂಡು ಮಾರಾಟ ಮಾಡುವುದು ಅಪರಾಧ. ಆದ್ದರಿಂದ ಎಲ್ಲ ಗುಟ್ಕಾ ಚೀಟಿಗಳನ್ನು ನಾಶಪಡಿಸಬೇಕು ಎಂದು ಅಧಿಕಾರಿಗಳು ಅಂಗಡಿಕಾರರಿಗೆ ಸೂಚಿಸಿದರು.<br /> <br /> `ಗುಟ್ಕಾ ಸೇವನೆಯಿಂದ ಆರೋಗ್ಯಕ್ಕೆ ಹಾನಿಯಾಗುತ್ತದೆ. ಗುಟ್ಕಾ ಮಾರಾಟ ನಿಷೇಧಿಸಿರುವ ಬಗ್ಗೆ ಅಂಗಡಿಕಾರರಿಗೆ ತಿಳಿವಳಿಕೆ ನೀಡಲಾಗುತ್ತಿದೆ. ಗುಟ್ಕಾ ಮಾರಾಟ ಬಂದ್ ಮಾಡುವಂತೆ ಅಂಗಡಿಕಾರರಿಗೆ ದಾಳಿ ಮೂಲಕ ಸೂಚಿಸಲಾಗಿದೆ. ಈ ಆದೇಶ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು. ಗುಟ್ಕಾ ನಿಷೇಧಕ್ಕೆ ಸಾರ್ವಜನಿಕರು ಸಹಕಾರ ನೀಡಬೇಕು' ಎಂದು ದಿಲೀಪಕುಮಾರ ಮುನೋಳಿ ಕೋರಿದರು.<br /> <br /> `ಜಿಲ್ಲೆಯಲ್ಲಿ ಚಿಕೂನ್ ಗುನ್ಯಾ ಹಾಗೂ ಡೆಂಗೆ ಜ್ವರದ ಶಂಕಿತ 165 ಪ್ರಕರಣಗಳು ದಾಖಲಾಗಿವೆ. ಡೆಂಗೆ ಜ್ವರದ 32 ಪ್ರಕರಣಗಳು ದೃಢಪಟ್ಟಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ. ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಜನರಿಗೆ ಮನವಿ ಮಾಡಲಾಗಿದೆ ಮುನೋಳಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಳಗಾವಿ: ರಾಜ್ಯ ಸರ್ಕಾರ ಗುಟ್ಕಾ ನಿಷೇಧಿಸಿದ ಹಿನ್ನಲೆಯಲ್ಲಿ ಆರೋಗ್ಯ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಇಲ್ಲಿನ ಕಚೇರಿ ರಸ್ತೆಯ ಪಾನ್- ಬೀಡಿ ಅಂಗಡಿಗಳ ಮೇಲೆ ಬುಧವಾರ ದಾಳಿ ನಡೆಸಿ ಗುಟ್ಕಾ ಚೀಟಿಗಳನ್ನು ನಾಶಪಡಿಸಿದರು.<br /> <br /> ಜಿಲ್ಲಾ ಆರೋಗ್ಯಾಧಿಕಾರಿ ದಿಲೀಪಕುಮಾರ ಮುನೋಳಿ ನೇತೃತ್ವದ ಅಧಿಕಾರಿಗಳ ತಂಡ ಕಚೇರಿ ರಸ್ತೆಯ ಆರು ಪಾನ್- ಬೀಡಿ ಅಂಗಡಿಗಳ ಮೇಲೆ ದಾಳಿ ನಡೆಸಿತು. ಗುಟ್ಕಾ ಚೀಟಿಗಳನ್ನು ವಶಪಡಿಸಿಕೊಂಡ ಅಧಿಕಾರಿಗಳು, ಅವುಗಳಿಗೆ ಬೆಂಕಿ ಹಚ್ಚಿ ಸುಟ್ಟುಹಾಕಿದರು. ಗುಟ್ಕಾ ಮಾರಾಟ ನಿಷೇಧಿಸಲಾಗಿದ್ದು, ಅವುಗಳನ್ನು ಸಂಗ್ರಹಿಸಿಟ್ಟುಕೊಂಡು ಮಾರಾಟ ಮಾಡುವುದು ಅಪರಾಧ. ಆದ್ದರಿಂದ ಎಲ್ಲ ಗುಟ್ಕಾ ಚೀಟಿಗಳನ್ನು ನಾಶಪಡಿಸಬೇಕು ಎಂದು ಅಧಿಕಾರಿಗಳು ಅಂಗಡಿಕಾರರಿಗೆ ಸೂಚಿಸಿದರು.<br /> <br /> `ಗುಟ್ಕಾ ಸೇವನೆಯಿಂದ ಆರೋಗ್ಯಕ್ಕೆ ಹಾನಿಯಾಗುತ್ತದೆ. ಗುಟ್ಕಾ ಮಾರಾಟ ನಿಷೇಧಿಸಿರುವ ಬಗ್ಗೆ ಅಂಗಡಿಕಾರರಿಗೆ ತಿಳಿವಳಿಕೆ ನೀಡಲಾಗುತ್ತಿದೆ. ಗುಟ್ಕಾ ಮಾರಾಟ ಬಂದ್ ಮಾಡುವಂತೆ ಅಂಗಡಿಕಾರರಿಗೆ ದಾಳಿ ಮೂಲಕ ಸೂಚಿಸಲಾಗಿದೆ. ಈ ಆದೇಶ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು. ಗುಟ್ಕಾ ನಿಷೇಧಕ್ಕೆ ಸಾರ್ವಜನಿಕರು ಸಹಕಾರ ನೀಡಬೇಕು' ಎಂದು ದಿಲೀಪಕುಮಾರ ಮುನೋಳಿ ಕೋರಿದರು.<br /> <br /> `ಜಿಲ್ಲೆಯಲ್ಲಿ ಚಿಕೂನ್ ಗುನ್ಯಾ ಹಾಗೂ ಡೆಂಗೆ ಜ್ವರದ ಶಂಕಿತ 165 ಪ್ರಕರಣಗಳು ದಾಖಲಾಗಿವೆ. ಡೆಂಗೆ ಜ್ವರದ 32 ಪ್ರಕರಣಗಳು ದೃಢಪಟ್ಟಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ. ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಜನರಿಗೆ ಮನವಿ ಮಾಡಲಾಗಿದೆ ಮುನೋಳಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>