ಬೀದಿಗಿಳಿದ ಮಠಾಧೀಶರು: ಮಾಜಿ ಶಾಸಕ ಬಾಳಾಸಾಹೇಬ ವಡ್ಡರ ಫೆ.8ರಿಂದ 5 ದಿನಗಳವರೆಗೆ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸಿದ್ದರು. ವಿವಿಧ ಸ್ವಾಮೀಜಿಗಳ ಮನವಿ ಮೇರೆಗೆ ಹೋರಾಟ ಮೊಟಕುಗೊಳಿಸಿದ್ದರು. ಅನೇಕ ಹೋರಾಟಗಾರರು ಸರದಿ ಉಪವಾಸ ಸತ್ಯಾಗ್ರಹದಲ್ಲೂ ಪಾಲ್ಗೊಂಡರು. ಶ್ರೀಶೈಲ ಡಾ.ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯರು, ನಿಡಸೋಶಿಯ ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಸೇರಿ 20ಕ್ಕೂ ಹೆಚ್ಚು ಮಠಾಧೀಶರು ಹೋರಾಟದಲ್ಲಿ ಪಾಲ್ಗೊಂಡಿದ್ದರು.