ಸಂತ್ರಸ್ತರೊಂದಿಗೆ ಚರ್ಚೆ:ಇದಕ್ಕೂ ಮುಂಚೆ ಸಂತ್ರಸ್ತರನ್ನು ಭೇಟಿ ಮಾಡಿ, ‘ಕೇಂದ್ರದಲ್ಲಿ ಊಟ, ಉಪಹಾರ ಸರಿಯಾಗಿ ನೀಡುತ್ತಿದ್ದಾರೆಯೇ ಎಂದು ವಿಚಾರಿಸಿದರು. ಸರ್ಕಾರದಿಂದ ಅಗತ್ಯ ಸೌಕರ್ಯ ಒದಗಿಸಲಾಗುವುದು. ಕೆಲವು ದಿನಗಳವರೆಗೆ ಮಾತ್ರ ಸಮಸ್ಯೆಯಾಗಲಿದ್ದು, ಧೈರ್ಯದಿಂದ ಇರಿ’ ಎಂದು ಆತ್ಮಸ್ಥೈರ್ಯ ತುಂಬಿದರು. ಆಹಾರ ಧಾನ್ಯ ಹಾಗೂ ಇನ್ನಿತರ ಸಾಮಗ್ರಿಗಳನ್ನು ವಿತರಿಸಿದರು.