ಹುಕ್ಕೇರಿ: ಹಿರೇಮಠದ ದಸರಾ ಉತ್ಸವದಲ್ಲಿ ಗುರುಶಾಂತೇಶ್ವರ ಜನಕಲ್ಯಾಣ ಪ್ರತಿಷ್ಠಾನದ ವತಿಯಿಂದ ಕೊಡುವ `ರೇಣುಕಶ್ರೀ~ ಪ್ರಶಸ್ತಿಗೆ ರಾಜ್ಯಸಭಾ ಸದಸ್ಯೆ ಹಾಗೂ ರಂಗ ಕಲಾವಿದೆ ಬಿ.ಜಯಶ್ರೀ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕೃಷಿ ಸಚಿವ ಉಮೇಶ ಕತ್ತಿ ಹೇಳಿದರು.
ಪ್ರತಿವರ್ಷ ನಡೆಯುವ ದಸರಾ ಉತ್ಸವದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹನೀಯರನ್ನು ಗುರುತಿಸಿ ನೀಡಲಾಗುವ ರೇಣುಕಶ್ರೀ ಪ್ರಶಸ್ತಿಯು ಹತ್ತು ಸಾವಿರ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ ಎಂದು ಪತ್ರಕರ್ತರಿಗೆ ತಿಳಿಸಿದರು.
ಪ್ರಸಕ್ತ ಸಾಲಿನ ಪ್ರಶಸ್ತಿ ಪ್ರದಾನ ಸಮಾರಂಭ ಅಕ್ಟೋಬರ್ 1 ರಂದು ಮಠಾಧ್ಯಕ್ಷ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯದಲ್ಲಿ ನಡೆಯಲಿದೆ. ಸೆ. 28ರಿಂದ ಅಕ್ಟೋಬರ್ 6 ರವರೆಗೆ ನಡೆಯುವ ದಸರಾ ಉತ್ಸವದಲ್ಲಿ ಮಕ್ಕಳ, ಜಾನಪದ, ಭಾವೈಕ್ಯ, ಶೈಕ್ಷಣಿಕ ಮತ್ತು ಮಹಿಳಾ ದಸರಾ ಕಾರ್ಯಕ್ರಮ ಜರುಗಲಿವೆ ಎಂದು ಹೇಳಿದರು.
ಗುರುಶಾಂತೇಶ್ವರ ಸಂಸ್ಥಾನ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹಾಜರಿದ್ದರು.