<p><strong>ದಾಂಡೇಲಿ:</strong> ಮಹಾದಾಯಿ ಜಲ ನ್ಯಾಯಮಂಡಳಿ ಅಧ್ಯಕ್ಷರಾದ ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಾಧೀಶ ಜೆ.ಎಚ್. ಪಾಂಚಾಲ ಅವರ ನೇತೃತ್ವದ ತಂಡ ಶುಕ್ರವಾರ ಸೂಪಾ ಡ್ಯಾಂ ಮತ್ತು ಅಂಬಿಕಾನಗರದ ನಾಗಝರಿ ಪವರ್ ಹೌಸ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.<br /> <br /> 18 ಮಂದಿಯ ತಂಡದಲ್ಲಿ ಗೋವಾ ಅಡ್ವೊಕೇಟ್ ಜನರಲ್ ಆತ್ಮರಾಮ ನಾಡಕರ್ಣಿ, ಕರ್ನಾಟಕದ ಅಡ್ವೊಕೇಟ್ ಜನರಲ್ ಎ.ಎಚ್. ಮೋಹನ ಕತಾರ್ಕಿ, ನಿವೃತ್ತ ಮುಖ್ಯ ನ್ಯಾಯಾಧೀಶರುಗಳಾದ ವಿನಯ ಮಿತ್ತಲ್, ಪಿ.ಎಸ್. ನಾರಾಯಣ ಅವರು ಇದ್ದರು<br /> .<br /> ಅವರು ಕರ್ನಾಟದಲ್ಲಿ ನಿರ್ಮಿತವಾಗಿರುವ ಅಣೆಕಟ್ಟೆಗಳಿಂದ ಅದರ ಸಂತ್ರಸ್ತರಿಗೆ ಆಗಿರುವ ಸಮಸ್ಯೆ, ಪರಿಸರಕ್ಕೆ ಉಂಟಾದ ಧಕ್ಕೆ ಹಾಗೂ ಅದರ ಸಾಧಕ -ಬಾಧಕಗಳ ಬಗ್ಗೆ ಪರಿಶೀಲಿಸಲು ಭೇಟಿ ನೀಡಿದ್ದರು ಎಂದು ತಿಳಿದುಬಂದಿದೆ. ಈ ಸಮಿತಿಯ ಜೊತೆಯಲ್ಲಿ ಕರ್ನಾಟಕ ಹಾಗೂ ಗೋವಾ ರಾಜ್ಯದ ಸುಮಾರು ನೂರಕ್ಕೂ ಹೆಚ್ಚಿನ ವಿವಿಧ ಇಲಾಖೆಯ ಅಧಿಕಾರಿಗಳು ಬಂದಿದ್ದರು.<br /> <br /> ಈ ಸಂದರ್ಭದಲ್ಲಿ ಗಣೇಶಗುಡಿಯ ಕೆಪಿಸಿ ಮುಖ್ಯ ಎಂಜಿನಿಯರ್ ಶಂಕರ ದೇವನೂರ, ಅಂಬಿಕಾನಗರದ ಕೆಪಿಸಿ ಮುಖ್ಯ ಎಂಜಿನಿಯರ್ ಲಕ್ಷಣ ಕಬಾಡೆ, ಕಾರವಾರ ಉಪ ವಿಭಾಗಾಧಿಕಾರಿ ಪುಷ್ಪಲತಾ ಹಾಗೂ ಪೊಲೀಸ್ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾಂಡೇಲಿ:</strong> ಮಹಾದಾಯಿ ಜಲ ನ್ಯಾಯಮಂಡಳಿ ಅಧ್ಯಕ್ಷರಾದ ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಾಧೀಶ ಜೆ.ಎಚ್. ಪಾಂಚಾಲ ಅವರ ನೇತೃತ್ವದ ತಂಡ ಶುಕ್ರವಾರ ಸೂಪಾ ಡ್ಯಾಂ ಮತ್ತು ಅಂಬಿಕಾನಗರದ ನಾಗಝರಿ ಪವರ್ ಹೌಸ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.<br /> <br /> 18 ಮಂದಿಯ ತಂಡದಲ್ಲಿ ಗೋವಾ ಅಡ್ವೊಕೇಟ್ ಜನರಲ್ ಆತ್ಮರಾಮ ನಾಡಕರ್ಣಿ, ಕರ್ನಾಟಕದ ಅಡ್ವೊಕೇಟ್ ಜನರಲ್ ಎ.ಎಚ್. ಮೋಹನ ಕತಾರ್ಕಿ, ನಿವೃತ್ತ ಮುಖ್ಯ ನ್ಯಾಯಾಧೀಶರುಗಳಾದ ವಿನಯ ಮಿತ್ತಲ್, ಪಿ.ಎಸ್. ನಾರಾಯಣ ಅವರು ಇದ್ದರು<br /> .<br /> ಅವರು ಕರ್ನಾಟದಲ್ಲಿ ನಿರ್ಮಿತವಾಗಿರುವ ಅಣೆಕಟ್ಟೆಗಳಿಂದ ಅದರ ಸಂತ್ರಸ್ತರಿಗೆ ಆಗಿರುವ ಸಮಸ್ಯೆ, ಪರಿಸರಕ್ಕೆ ಉಂಟಾದ ಧಕ್ಕೆ ಹಾಗೂ ಅದರ ಸಾಧಕ -ಬಾಧಕಗಳ ಬಗ್ಗೆ ಪರಿಶೀಲಿಸಲು ಭೇಟಿ ನೀಡಿದ್ದರು ಎಂದು ತಿಳಿದುಬಂದಿದೆ. ಈ ಸಮಿತಿಯ ಜೊತೆಯಲ್ಲಿ ಕರ್ನಾಟಕ ಹಾಗೂ ಗೋವಾ ರಾಜ್ಯದ ಸುಮಾರು ನೂರಕ್ಕೂ ಹೆಚ್ಚಿನ ವಿವಿಧ ಇಲಾಖೆಯ ಅಧಿಕಾರಿಗಳು ಬಂದಿದ್ದರು.<br /> <br /> ಈ ಸಂದರ್ಭದಲ್ಲಿ ಗಣೇಶಗುಡಿಯ ಕೆಪಿಸಿ ಮುಖ್ಯ ಎಂಜಿನಿಯರ್ ಶಂಕರ ದೇವನೂರ, ಅಂಬಿಕಾನಗರದ ಕೆಪಿಸಿ ಮುಖ್ಯ ಎಂಜಿನಿಯರ್ ಲಕ್ಷಣ ಕಬಾಡೆ, ಕಾರವಾರ ಉಪ ವಿಭಾಗಾಧಿಕಾರಿ ಪುಷ್ಪಲತಾ ಹಾಗೂ ಪೊಲೀಸ್ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>