‘ಇಷ್ಟು ದಿನಗಳ ಕಾಲ ಬಡತನ, ಅನಕ್ಷರತೆ, ಜಾತಿ, ಧರ್ಮಗಳ ಹೆಸರಿನಲ್ಲಿ ಮೌಢ್ಯವನ್ನು ಬಿತ್ತಲಾಗಿತ್ತು. ಆದರೆ, ಈಗ ರಾಷ್ಟ್ರೀಯತೆ ಹಾಗೂ ಹಿಂದುತ್ವದ ಹೆಸರಿನಲ್ಲಿ ಮೌಢ್ಯ ಬಿತ್ತಲು ಹೊರಟಿದ್ದಾರೆ. ವೈವಿಧ್ಯದ ಸಮಾಜವನ್ನು ತುಳಿದು, ಒಂದು ಧರ್ಮದ ಸಮಾಜವನ್ನು ಕಟ್ಟಲು ಹೊರಟಿದ್ದಾರೆ’ ಎಂದು ಅವರು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಹೆಸರನ್ನು ಉಲ್ಲೇಖಿಸದೇ ವಾಗ್ದಾಳಿ ನಡೆಸಿದರು.