<p><strong>ಬೆಳಗಾವಿ:</strong> ನಗರದಲ್ಲಿ ದುರ್ಗಾಮಾತೆ ಮೆರವಣಿಗೆ ಹಾಗೂ ಬನ್ನಿ ಗಿಡಕ್ಕೆ ಪೂಜೆ ಸಲ್ಲಿಸುವ ಮೂಲಕ ಗುರುವಾರ ಭಕ್ತರು ವಿಜಯ ದಶಮಿ ಹಬ್ಬವನ್ನು ಸಂಭ್ರಮ, ಸಡಗರದಿಂದ ಆಚರಿಸಿದರು.<br /> ಕೇಳ್ಕರಭಾಗದಲ್ಲಿ ಬೆಳಿಗ್ಗೆ ಏರ್ಪಡಿಸಿದ್ದ ದುರ್ಗಾಮಾತಾ ದೌಡ್ನಲ್ಲಿ ಸಾವಿರಾರು ಜನರು ಭಾಗವಹಿಸಿದ್ದರು. ಅದರಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲಾಗಿತ್ತು.<br /> <br /> ಟ್ರ್ಯಾಕ್ಟರ್ನಲ್ಲಿ `ದುರ್ಗೆ~ ಮೂರ್ತಿ ಇಟ್ಟುಕೊಂಡು ಭಕ್ತರು ಆಯಾ ಪ್ರದೇಶಗಳಲ್ಲಿ ಮೆರವಣಿಗೆ ಮಾಡಿದರು. ಮಹಿಳೆಯರು ದೇವರ ಮೂರ್ತಿಗೆ ಪೂಜೆ ಸಲ್ಲಿಸಿ ಬರ ಮಾಡಿಕೊಂಡರು. ಯುವಕರು ದಂಡು ಮೆರವಣಿಗೆಯಲ್ಲಿ ಹಾಡುಗಳಿಗೆ ಹೆಜ್ಜೆ ಹಾಕುತ್ತಿತ್ತು.<br /> <br /> ನಗರದ ವಿವಿಧ ದೇವಸ್ಥಾನಗಳ ಪಲ್ಲಕ್ಕಿಗಳು ಮಧ್ಯಾಹ್ನದ ವೇಳೆಗೆ ದೇವಸ್ಥಾನದಿಂದ ಹೊರಟು ಸಂಜೆಯ ವೇಳೆಗೆ ಜ್ಯೋತಿ ಕಾಲೇಜಿಗೆ ಹೊಂದಿಕೊಂಡಿರುವ ಬನ್ನಿ ಮೈದಾನಕ್ಕೆ ಆಗಮಿಸಿದ್ದವು.<br /> <br /> ಅದೇ ರೀತಿ ಕ್ಯಾಂಪ್ನಿಂದ ಆರಂಭಗೊಂಡ ದುರ್ಗಾಮಾತೆಯ ಮೆರವಣಿಗೆಯೂ ಬನ್ನಿ ಮೈದಾನಕ್ಕೆ ಆಗಮಿಸಿತು. ಬನ್ನಿ ಮುಡಿಯುವ ಕಾರ್ಯಕ್ರಮ ನಂತರ ಭಕ್ತರು ಪರಸ್ಪರ ಬನ್ನಿ ಹಂಚಿಕೊಂಡು ಶುಭ ಹಾರೈಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ನಗರದಲ್ಲಿ ದುರ್ಗಾಮಾತೆ ಮೆರವಣಿಗೆ ಹಾಗೂ ಬನ್ನಿ ಗಿಡಕ್ಕೆ ಪೂಜೆ ಸಲ್ಲಿಸುವ ಮೂಲಕ ಗುರುವಾರ ಭಕ್ತರು ವಿಜಯ ದಶಮಿ ಹಬ್ಬವನ್ನು ಸಂಭ್ರಮ, ಸಡಗರದಿಂದ ಆಚರಿಸಿದರು.<br /> ಕೇಳ್ಕರಭಾಗದಲ್ಲಿ ಬೆಳಿಗ್ಗೆ ಏರ್ಪಡಿಸಿದ್ದ ದುರ್ಗಾಮಾತಾ ದೌಡ್ನಲ್ಲಿ ಸಾವಿರಾರು ಜನರು ಭಾಗವಹಿಸಿದ್ದರು. ಅದರಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲಾಗಿತ್ತು.<br /> <br /> ಟ್ರ್ಯಾಕ್ಟರ್ನಲ್ಲಿ `ದುರ್ಗೆ~ ಮೂರ್ತಿ ಇಟ್ಟುಕೊಂಡು ಭಕ್ತರು ಆಯಾ ಪ್ರದೇಶಗಳಲ್ಲಿ ಮೆರವಣಿಗೆ ಮಾಡಿದರು. ಮಹಿಳೆಯರು ದೇವರ ಮೂರ್ತಿಗೆ ಪೂಜೆ ಸಲ್ಲಿಸಿ ಬರ ಮಾಡಿಕೊಂಡರು. ಯುವಕರು ದಂಡು ಮೆರವಣಿಗೆಯಲ್ಲಿ ಹಾಡುಗಳಿಗೆ ಹೆಜ್ಜೆ ಹಾಕುತ್ತಿತ್ತು.<br /> <br /> ನಗರದ ವಿವಿಧ ದೇವಸ್ಥಾನಗಳ ಪಲ್ಲಕ್ಕಿಗಳು ಮಧ್ಯಾಹ್ನದ ವೇಳೆಗೆ ದೇವಸ್ಥಾನದಿಂದ ಹೊರಟು ಸಂಜೆಯ ವೇಳೆಗೆ ಜ್ಯೋತಿ ಕಾಲೇಜಿಗೆ ಹೊಂದಿಕೊಂಡಿರುವ ಬನ್ನಿ ಮೈದಾನಕ್ಕೆ ಆಗಮಿಸಿದ್ದವು.<br /> <br /> ಅದೇ ರೀತಿ ಕ್ಯಾಂಪ್ನಿಂದ ಆರಂಭಗೊಂಡ ದುರ್ಗಾಮಾತೆಯ ಮೆರವಣಿಗೆಯೂ ಬನ್ನಿ ಮೈದಾನಕ್ಕೆ ಆಗಮಿಸಿತು. ಬನ್ನಿ ಮುಡಿಯುವ ಕಾರ್ಯಕ್ರಮ ನಂತರ ಭಕ್ತರು ಪರಸ್ಪರ ಬನ್ನಿ ಹಂಚಿಕೊಂಡು ಶುಭ ಹಾರೈಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>