<p><strong>ಬೆಳಗಾವಿ:</strong> ಭಾರತೀಯ ಜನತಾ ಪಕ್ಷವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಳೆದ ಮೂರೂವರೆ ವರ್ಷಗಳಲ್ಲಿ ಮುಖ್ಯಮಂತ್ರಿ ಹಾಗೂ ಸಚಿವರುಗಳು ಸಭೆ- ಸಮಾರಂಭಗಳಿಗೆ ವಿಮಾನಗಳಲ್ಲಿ ಹೋಗಲು ವೆಚ್ಚ ಮಾಡಿದ್ದು ಬರೋಬ್ಬರಿ 43.16 ಕೋಟಿ ರೂಪಾಯಿ!<br /> <br /> ಬಿ.ಎಸ್. ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ಆಡಳಿತ ನಡೆಸಿದ ಮೂರೂವರೆ ವರ್ಷಗಳ ಅವಧಿಯಲ್ಲಿ ತಮಗೆ ಹಾಗೂ ತಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳ ಉಪಯೋಗಕ್ಕಾಗಿ ವಿಶೇಷ ವಿಮಾನ, ಏರ್ಕ್ರಾಫ್ಟ್ ಹಾಗೂ ಹೆಲಿಕಾಪ್ಟರ್ಗಳಿಗೆ ಒಟ್ಟು 43,16,11,534 ರೂಪಾಯಿ ಖರ್ಚು ಮಾಡಿದ್ದಾರೆ. <br /> <br /> `2008-09ನೇ ಸಾಲಿನಲ್ಲಿ ರೂ. 8.18 ಕೋಟಿ, 2009-10ನೇ ಸಾಲಿನಲ್ಲಿ ರೂ. 13.45 ಕೋಟಿ ಹಾಗೂ 2010-11ನೇ ಸಾಲಿನಲ್ಲಿ ರೂ. 15.22 ಕೋಟಿ ಮತ್ತು 2011ರಿಂದ ಜುಲೈ 2012ನೇ ಸಾಲಿನವರೆಗೆ 6.29 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ~ ಎಂದು ಜಿಲ್ಲೆಯ ಮೂಡಲಗಿಯ ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ಅವರಿಗೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ವಿವರ ನೀಡಿದ್ದಾರೆ. <br /> <br /> ದಕ್ಷಿಣ ಭಾರತದಲ್ಲಿ ಇದೇ ಮೊದಲ ಬಾರಿಗೆ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರವು ಸಭೆ- ಸಮಾರಂಭ ಗಳಿಗಾಗಿ ನೀರಿನಂತೆ ಹಣವನ್ನು ಪೋಲು ಮಾಡುತ್ತಿದೆ. ರಾಜ್ಯದಲ್ಲಿ ಕಳೆದ ಎರಡು ವರ್ಷಗಳಿಂದ ಜಿಲ್ಲಾ ಉಸ್ತುವಾರಿ ಸಚಿವರು ಸರಿಯಾಗಿ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಗಳನ್ನು ನಡೆಸುತ್ತಿಲ್ಲ. ಅನೇಕ ಜಲಾಶಯಗಳಲ್ಲಿನ ಹೂಳು ತೆಗೆಯಲು ಸರ್ಕಾರದ ಬಳಿ ಹಣವಿಲ್ಲ. ಹೀಗಿದ್ದಾಗ ಸಚಿವರು ಸಭೆ-ಸಮಾರಂಭ ಗಳಿಗೆಂದು ವಿಮಾನದಲ್ಲಿ ಹೋಗಿ ಹಣವನ್ನು ದುಂದುವೆಚ್ಚ ಮಾಡುವುದು ಎಷ್ಟರ ಮಟ್ಟಿಗೆ ಸರಿ? ಎಂದು ಭೀಮಪ್ಪ ಗಡಾದ ಪ್ರಶ್ನಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಭಾರತೀಯ ಜನತಾ ಪಕ್ಷವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಳೆದ ಮೂರೂವರೆ ವರ್ಷಗಳಲ್ಲಿ ಮುಖ್ಯಮಂತ್ರಿ ಹಾಗೂ ಸಚಿವರುಗಳು ಸಭೆ- ಸಮಾರಂಭಗಳಿಗೆ ವಿಮಾನಗಳಲ್ಲಿ ಹೋಗಲು ವೆಚ್ಚ ಮಾಡಿದ್ದು ಬರೋಬ್ಬರಿ 43.16 ಕೋಟಿ ರೂಪಾಯಿ!<br /> <br /> ಬಿ.ಎಸ್. ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ಆಡಳಿತ ನಡೆಸಿದ ಮೂರೂವರೆ ವರ್ಷಗಳ ಅವಧಿಯಲ್ಲಿ ತಮಗೆ ಹಾಗೂ ತಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳ ಉಪಯೋಗಕ್ಕಾಗಿ ವಿಶೇಷ ವಿಮಾನ, ಏರ್ಕ್ರಾಫ್ಟ್ ಹಾಗೂ ಹೆಲಿಕಾಪ್ಟರ್ಗಳಿಗೆ ಒಟ್ಟು 43,16,11,534 ರೂಪಾಯಿ ಖರ್ಚು ಮಾಡಿದ್ದಾರೆ. <br /> <br /> `2008-09ನೇ ಸಾಲಿನಲ್ಲಿ ರೂ. 8.18 ಕೋಟಿ, 2009-10ನೇ ಸಾಲಿನಲ್ಲಿ ರೂ. 13.45 ಕೋಟಿ ಹಾಗೂ 2010-11ನೇ ಸಾಲಿನಲ್ಲಿ ರೂ. 15.22 ಕೋಟಿ ಮತ್ತು 2011ರಿಂದ ಜುಲೈ 2012ನೇ ಸಾಲಿನವರೆಗೆ 6.29 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ~ ಎಂದು ಜಿಲ್ಲೆಯ ಮೂಡಲಗಿಯ ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ಅವರಿಗೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ವಿವರ ನೀಡಿದ್ದಾರೆ. <br /> <br /> ದಕ್ಷಿಣ ಭಾರತದಲ್ಲಿ ಇದೇ ಮೊದಲ ಬಾರಿಗೆ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರವು ಸಭೆ- ಸಮಾರಂಭ ಗಳಿಗಾಗಿ ನೀರಿನಂತೆ ಹಣವನ್ನು ಪೋಲು ಮಾಡುತ್ತಿದೆ. ರಾಜ್ಯದಲ್ಲಿ ಕಳೆದ ಎರಡು ವರ್ಷಗಳಿಂದ ಜಿಲ್ಲಾ ಉಸ್ತುವಾರಿ ಸಚಿವರು ಸರಿಯಾಗಿ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಗಳನ್ನು ನಡೆಸುತ್ತಿಲ್ಲ. ಅನೇಕ ಜಲಾಶಯಗಳಲ್ಲಿನ ಹೂಳು ತೆಗೆಯಲು ಸರ್ಕಾರದ ಬಳಿ ಹಣವಿಲ್ಲ. ಹೀಗಿದ್ದಾಗ ಸಚಿವರು ಸಭೆ-ಸಮಾರಂಭ ಗಳಿಗೆಂದು ವಿಮಾನದಲ್ಲಿ ಹೋಗಿ ಹಣವನ್ನು ದುಂದುವೆಚ್ಚ ಮಾಡುವುದು ಎಷ್ಟರ ಮಟ್ಟಿಗೆ ಸರಿ? ಎಂದು ಭೀಮಪ್ಪ ಗಡಾದ ಪ್ರಶ್ನಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>