<p><strong>ನಿಪ್ಪಾಣಿ</strong>: ತಾಲ್ಲೂಕಿನ ತಹಶೀಲ್ದಾರ್ ಕಾರ್ಯಾಲಯವನ್ನು ಬುಧವಾರ ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಉದ್ಘಾಟಿಸಿದರು.</p>.<p>‘ಕಾಂಗ್ರೆಸ್ ಮುಖಂಡ ಕಾಕಾಸಾಹೇಬ ಪಾಟೀಲ ಅವರ ಸತತ ಪ್ರಯತ್ನದಿಂದಾಗಿ ತಾಲ್ಲೂಕು ಘೋಷಣೆಯಾಗಿದೆ. ತಾಲ್ಲೂಕಿನ ಸರ್ವಾಂಗೀಣ ವಿಕಾಸಕ್ಕೆ ಕಟಿಬದ್ಧರಾಗಿದ್ದೇವೆ. ರಾಜಕಾರಣಕ್ಕಾಗಿ ಸರ್ಕಾರಿ ಕಾರ್ಯ ಅಥವಾ ಕಾರ್ಯಾಲಯದ ಬಳಕೆ ಸೂಕ್ತವಲ್ಲ’ ಎಂದರು.</p>.<p>ಚಿಕ್ಕೋಡಿ ತಹಶೀಲ್ದಾರ್ ಚಿದಂಬರ ಕುಲಕರ್ಣಿ ಪ್ರಾಸ್ತಾವಿಕವಾಗಿ ಮಾತನಾಡಿ ‘ಶೀಘ್ರದಲ್ಲಿಯೇ ಎಲ್ಲ ಕಚೇರಿಗಳನ್ನು ಆರಂಭಿಸಲಾಗುವುದು. ತಾಲ್ಲೂಕು ವ್ಯಾಪ್ತಿಯಲ್ಲಿ ಒಟ್ಟು 34 ಗ್ರಾಮ ಪಂಚಾಯ್ತಿಗಳಿದ್ದು, 53 ಗ್ರಾಮಗಳಿವೆ. 3.10 ಲಕ್ಷ ಜನಸಂಖ್ಯೆ ಇದೆ. ಮಿನಿ ವಿಧಾನಸೌದ ನಿರ್ಮಿಸಲು ನಗರಸಭೆಯು 2 ಎಕರೆ ಜಾಗ ನೀಡಿದ್ದು, ಶೀಘ್ರದಲ್ಲಿಯೇ ಕಾಮಗಾರಿ ಆರಂಭಿಸಲಾಗುವುದು ಎಂದರು.</p>.<p>ಚಿಕ್ಕೋಡಿ ಉಪವಿಭಾಗಾಧಿಕಾರಿ ಗೀತಾ ಕೌಲಗಿ ಮಾತನಾಡಿದರು. ಕಾಂಗ್ರೆಸ್ ಮುಖಂಡ ಕಾಕಾಸಾಹೇಬ ಪಾಟೀಲ, ಸುಭಾಷ ಜೋಶಿ, ನಗರಸಭೆ ಅಧ್ಯಕ್ಷ ವಿಲಾಸ್ ಗಾಡಿವಡ್ಡರ, ಉಪಾಧ್ಯಕ್ಷ ಸುನೀಲ ಪಾಟೀಲ ವೇದಿಕೆಯಲ್ಲಿದ್ದರು. ನಿಪ್ಪಾಣಿ ತಹಶೀಲ್ದಾರ್ ಸಂಜೀವ ಕಾಂಬಳೆ ಸ್ವಾಗತಿಸಿದರು. ಶಾಸಕಿ ಶಶಿಕಲಾ ಜೊಲ್ಲೆ ಈಗಾಗಲೇ ಕಾರ್ಯಾಲಯ ಉದ್ಘಾಟಿಸಿದ್ದರು.</p>.<p>‘ಶಾಸಕಿ ತಮ್ಮ ಕಾರ್ಯಕರ್ತರೊಂದಿಗೆ ಕಾರ್ಯಾಲಯ ಉದ್ಘಾಟಿಸಿದ್ದಾರೆ. ಶಿಷ್ಟಾಚಾರದಂತೆ ಜಿಲ್ಲಾ ಉಸ್ತುವಾರಿ ಸಚಿವರು, ಅಧಿಕಾರಿಗಳು ಹಾಗೂ ಸಾರ್ವಜನಿಕರ ಸಮ್ಮುಖದಲ್ಲಿ ಕಚೇರಿ ಉದ್ಘಾಟಿಸಲಾಗುವುದು’ ಎಂದು ನಗರಸಭೆ ಅಧ್ಯಕ್ಷ ವಿಲಾಸ ಗಾಡಿವಡ್ಡರ್ ಹೇಳಿದ್ದರು.</p>.<p>ಅದರಂತೆ ಬುಧವಾರ ಮತ್ತೆ ಕಾರ್ಯಾಲಯ ಉದ್ಘಾಟಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಿಪ್ಪಾಣಿ</strong>: ತಾಲ್ಲೂಕಿನ ತಹಶೀಲ್ದಾರ್ ಕಾರ್ಯಾಲಯವನ್ನು ಬುಧವಾರ ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಉದ್ಘಾಟಿಸಿದರು.</p>.<p>‘ಕಾಂಗ್ರೆಸ್ ಮುಖಂಡ ಕಾಕಾಸಾಹೇಬ ಪಾಟೀಲ ಅವರ ಸತತ ಪ್ರಯತ್ನದಿಂದಾಗಿ ತಾಲ್ಲೂಕು ಘೋಷಣೆಯಾಗಿದೆ. ತಾಲ್ಲೂಕಿನ ಸರ್ವಾಂಗೀಣ ವಿಕಾಸಕ್ಕೆ ಕಟಿಬದ್ಧರಾಗಿದ್ದೇವೆ. ರಾಜಕಾರಣಕ್ಕಾಗಿ ಸರ್ಕಾರಿ ಕಾರ್ಯ ಅಥವಾ ಕಾರ್ಯಾಲಯದ ಬಳಕೆ ಸೂಕ್ತವಲ್ಲ’ ಎಂದರು.</p>.<p>ಚಿಕ್ಕೋಡಿ ತಹಶೀಲ್ದಾರ್ ಚಿದಂಬರ ಕುಲಕರ್ಣಿ ಪ್ರಾಸ್ತಾವಿಕವಾಗಿ ಮಾತನಾಡಿ ‘ಶೀಘ್ರದಲ್ಲಿಯೇ ಎಲ್ಲ ಕಚೇರಿಗಳನ್ನು ಆರಂಭಿಸಲಾಗುವುದು. ತಾಲ್ಲೂಕು ವ್ಯಾಪ್ತಿಯಲ್ಲಿ ಒಟ್ಟು 34 ಗ್ರಾಮ ಪಂಚಾಯ್ತಿಗಳಿದ್ದು, 53 ಗ್ರಾಮಗಳಿವೆ. 3.10 ಲಕ್ಷ ಜನಸಂಖ್ಯೆ ಇದೆ. ಮಿನಿ ವಿಧಾನಸೌದ ನಿರ್ಮಿಸಲು ನಗರಸಭೆಯು 2 ಎಕರೆ ಜಾಗ ನೀಡಿದ್ದು, ಶೀಘ್ರದಲ್ಲಿಯೇ ಕಾಮಗಾರಿ ಆರಂಭಿಸಲಾಗುವುದು ಎಂದರು.</p>.<p>ಚಿಕ್ಕೋಡಿ ಉಪವಿಭಾಗಾಧಿಕಾರಿ ಗೀತಾ ಕೌಲಗಿ ಮಾತನಾಡಿದರು. ಕಾಂಗ್ರೆಸ್ ಮುಖಂಡ ಕಾಕಾಸಾಹೇಬ ಪಾಟೀಲ, ಸುಭಾಷ ಜೋಶಿ, ನಗರಸಭೆ ಅಧ್ಯಕ್ಷ ವಿಲಾಸ್ ಗಾಡಿವಡ್ಡರ, ಉಪಾಧ್ಯಕ್ಷ ಸುನೀಲ ಪಾಟೀಲ ವೇದಿಕೆಯಲ್ಲಿದ್ದರು. ನಿಪ್ಪಾಣಿ ತಹಶೀಲ್ದಾರ್ ಸಂಜೀವ ಕಾಂಬಳೆ ಸ್ವಾಗತಿಸಿದರು. ಶಾಸಕಿ ಶಶಿಕಲಾ ಜೊಲ್ಲೆ ಈಗಾಗಲೇ ಕಾರ್ಯಾಲಯ ಉದ್ಘಾಟಿಸಿದ್ದರು.</p>.<p>‘ಶಾಸಕಿ ತಮ್ಮ ಕಾರ್ಯಕರ್ತರೊಂದಿಗೆ ಕಾರ್ಯಾಲಯ ಉದ್ಘಾಟಿಸಿದ್ದಾರೆ. ಶಿಷ್ಟಾಚಾರದಂತೆ ಜಿಲ್ಲಾ ಉಸ್ತುವಾರಿ ಸಚಿವರು, ಅಧಿಕಾರಿಗಳು ಹಾಗೂ ಸಾರ್ವಜನಿಕರ ಸಮ್ಮುಖದಲ್ಲಿ ಕಚೇರಿ ಉದ್ಘಾಟಿಸಲಾಗುವುದು’ ಎಂದು ನಗರಸಭೆ ಅಧ್ಯಕ್ಷ ವಿಲಾಸ ಗಾಡಿವಡ್ಡರ್ ಹೇಳಿದ್ದರು.</p>.<p>ಅದರಂತೆ ಬುಧವಾರ ಮತ್ತೆ ಕಾರ್ಯಾಲಯ ಉದ್ಘಾಟಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>