‘ರಾಜ್ಯದಲ್ಲಿ ಈಗ ಭೀಕರ ಬರಗಾಲ ಬಿದ್ದಿದ್ದು, ಜನ– ಜಾನುವಾರುಗಳಿಗೆ ಕುಡಿಯಲು ನೀರಿಲ್ಲ. ರಾಯಬಾಗ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ನೀರಿನ ಕೊರತೆ ಕಾಡುತ್ತಿದೆ. ಈ ಕೂಡಲೇ ಕಾಲುವೆಗಳಲ್ಲಿ ನೀರು ಹರಿಸಬೇಕು’ ಎಂದು ಒತ್ತಾಯಿಸಿದರು.‘ಎಸ್ಎಪಿ ಕಾಯ್ದೆ ರಚನೆಯಾದಾಗ ಕಬ್ಬಿಗೆ ಉತ್ತಮ ಬೆಲೆ ಬರುತ್ತದೆ ಎಂದು ರೈತರು ನಂಬಿದ್ದರು. ಆದರೆ, ಇದು ಕಾರ್ಯರೂಪಕ್ಕೆ ಬರಲಿಲ್ಲ. ಹಲವಾರು ಸಕ್ಕರೆ ಕಾರ್ಖಾನೆಗಳು ರೈತರ ಬಿಲ್ ಬಾಕಿ ಉಳಿಸಿಕೊಂಡಿವೆ. ರೈತರ ಆರ್ಥಿಕ ಸ್ಥಿತಿ ತುಂಬಾ ಚಿಂತಾಜನಕವಾಗಿದೆ’ ಎಂದು ಹೇಳಿದರು.ಚೂನಪ್ಪ ಪೂಜೇರಿ, ರಾಘವೇಂದ್ರ ನಾಯಕ, ಅಶೋಕ ಯಮಕನಮರಡಿ, ಗಣಪತಿ ಈಳಗೇರಿ, ಶ್ರೀಶೈಲ ಅಂಗಡಿ, ಮಲ್ಲಣ್ಣಾ ರಾಮದುರ್ಗ ಮತ್ತು ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.