<p><strong>ಮೂಡಲಗಿ: </strong>ಮೂಡಲಗಿಯಲ್ಲಿ ಹೆಸ್ಕಾಂ ಉಪ ವಿಭಾಗೀಯ ಕಚೇರಿ ಪ್ರಾರಂಭಿಸಬೇಕು ಒತ್ತಾಯಿಸಿ ಇದೇ 26ರಂದು ಸ್ಥಳೀಯ ಹೆಸ್ಕಾಂ ಕಚೇರಿ ಎದುರು ರೈತ ಮತ್ತು ಸಾರ್ವಜನಿಕ ಹೋರಾಟ ಸಂಘಟನೆ ಧರಣಿ ನಡೆಸುವುದಾಗಿ ತಿಳಿಸಿದೆ.<br /> <br /> ಈ ಕುರಿತು ಈಗಾಗಲೇ ಘಟಪ್ರಭಾ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ಗೆ ಪತ್ರ ಬರೆಯಲಾಗಿದೆ. ಕಂಪೆನಿಯ ನಿಯಮಾವಳಿ ಪ್ರಕಾರ ಸುಟ್ಟಿರುವ ಪರಿವರ್ತಕಗಳನ್ನು 15 ದಿನಗಳಲ್ಲಿ ದುರಸ್ತಿ ಮಾಡಿಸುವುದು, ಅಕ್ರಮ, ಸಕ್ರಮ ಯೋಜನೆಯಲ್ಲಿ ರೈತರಿಂದ ಹಣ ತುಂಬಿಸಿಕೊಂಡಿದ್ದು, ಅವುಗಳ ಸಾಮಗ್ರಿಗಳನ್ನು ಬೇಗನೆ ವಿಲೇವಾರಿ ಮಾಡಬೇಕು. <br /> <br /> ಹೆಸ್ಕಾಂ ನಿಯಮಾವಳಿಗಳನ್ನು ಕಚೇರಿ ಮುಂದೆ ಅಳವಡಿಸಬೇಕು. ಹಳೆಯ ವಿದ್ಯುತ್ ಕಂಬಗಳನ್ನು ಬದಲಾಯಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಯಲಿದೆ ಎಂದು ಹೋರಾಟದ ನೇತೃತ್ವ ವಹಿಸಿರುವ ಬಿ.ಜಿ. ಗಡಾದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.<br /> <br /> ಹೆಸ್ಕಾಂ ಅಧಿಕಾರಿಗಳು ತಮ್ಮ ಬೇಡಿಕೆಗೆ ಸ್ಪಂದಿಸಿ ಪರಿಹಾರ ವ್ಯವಸ್ಥೆ ಕಲ್ಪಿಸದಿದ್ದರೆ ಅನಿರ್ಧಿಷ್ಟ ಧರಣಿ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.<br /> <br /> <strong>ಬೆಳೆ ಸಾಲ: ಅವಧಿ ವಿಸ್ತರಣೆ<br /> ಚಿಕ್ಕೋಡಿ: </strong>ಕೇಂದ್ರ ಹಣಕಾಸು ಸಚಿವಾಲಯದ ಆದೇಶದಂತೆ ಯಾವುದೇ ಬ್ಯಾಂಕು ಅಥವಾ ಸಹಕಾರ ಸಂಘಗಳಿಂದ ಬೆಳೆ ಸಾಲ ಪಡೆಯದೇ ಇರುವ ರೈತರಿಗೆ ಸೆ.30ರ ವರೆಗೆ ಸಾಲ ಪಡೆಯಲು ಅವಕಾಶ ಒದಗಿಸಲಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ಎನ್.ಬಿ. ರೊಟ್ಟಿ ತಿಳಿಸಿದ್ದಾರೆ.<br /> <br /> ತಾಲ್ಲೂಕಿನ ಯಾವುದೇ ಬ್ಯಾಂಕು ಅಥವಾ ಸಹಕಾರ ಸಂಘಗಳಿಂದ ಕೃಷಿ ಅಥವಾ ಬೆಳೆ ಸಾಲ ಪಡೆಯದೇ ಇರುವ ರೈತರು ಸಂಬಂಧಪಟ್ಟ ಗ್ರಾಮದ ಬ್ಯಾಂಕು ಅಥವಾ ಸಹಕಾರಿ ಸಂಘಗಳನ್ನು ಸಂಪರ್ಕಿಸಿ ಸಾಲ ಪಡೆಯಬಹುದು. ಈ ಅವಧಿಯಲ್ಲಿ ಸಾಲ ಪಡೆಯುವ ರೈತರಿಗೆ ಬ್ಯಾಂಕುಗಳಿಂದ ಕೆಲವು ರಿಯಾಯಿತಿ ದೊರಯಲಿವೆ.<br /> <br /> ಸರಳೀಕೃತ ಕೃಷಿ ಅಥವಾ ಬೆಳೆ ಸಾಲ ಅರ್ಜಿ ಫಾರ್ಮ್ಗಳನ್ನು ಜಿಲ್ಲೆ ಎಲ್ಲ ಬ್ಯಾಂಕ್ಗಳ ಶಾಖೆಗಳಲ್ಲಿ ಮತ್ತು ಗ್ರಾಮ ಪಂಚಾಯಿತಿಗಳಲ್ಲಿ ಸಿಗುತ್ತವೆ. ಸೆ.30ರ ಒಳಗಾಗಿ ಕೃಷಿಕರು ಸಾಲ ಪಡೆಯಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಡಲಗಿ: </strong>ಮೂಡಲಗಿಯಲ್ಲಿ ಹೆಸ್ಕಾಂ ಉಪ ವಿಭಾಗೀಯ ಕಚೇರಿ ಪ್ರಾರಂಭಿಸಬೇಕು ಒತ್ತಾಯಿಸಿ ಇದೇ 26ರಂದು ಸ್ಥಳೀಯ ಹೆಸ್ಕಾಂ ಕಚೇರಿ ಎದುರು ರೈತ ಮತ್ತು ಸಾರ್ವಜನಿಕ ಹೋರಾಟ ಸಂಘಟನೆ ಧರಣಿ ನಡೆಸುವುದಾಗಿ ತಿಳಿಸಿದೆ.<br /> <br /> ಈ ಕುರಿತು ಈಗಾಗಲೇ ಘಟಪ್ರಭಾ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ಗೆ ಪತ್ರ ಬರೆಯಲಾಗಿದೆ. ಕಂಪೆನಿಯ ನಿಯಮಾವಳಿ ಪ್ರಕಾರ ಸುಟ್ಟಿರುವ ಪರಿವರ್ತಕಗಳನ್ನು 15 ದಿನಗಳಲ್ಲಿ ದುರಸ್ತಿ ಮಾಡಿಸುವುದು, ಅಕ್ರಮ, ಸಕ್ರಮ ಯೋಜನೆಯಲ್ಲಿ ರೈತರಿಂದ ಹಣ ತುಂಬಿಸಿಕೊಂಡಿದ್ದು, ಅವುಗಳ ಸಾಮಗ್ರಿಗಳನ್ನು ಬೇಗನೆ ವಿಲೇವಾರಿ ಮಾಡಬೇಕು. <br /> <br /> ಹೆಸ್ಕಾಂ ನಿಯಮಾವಳಿಗಳನ್ನು ಕಚೇರಿ ಮುಂದೆ ಅಳವಡಿಸಬೇಕು. ಹಳೆಯ ವಿದ್ಯುತ್ ಕಂಬಗಳನ್ನು ಬದಲಾಯಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಯಲಿದೆ ಎಂದು ಹೋರಾಟದ ನೇತೃತ್ವ ವಹಿಸಿರುವ ಬಿ.ಜಿ. ಗಡಾದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.<br /> <br /> ಹೆಸ್ಕಾಂ ಅಧಿಕಾರಿಗಳು ತಮ್ಮ ಬೇಡಿಕೆಗೆ ಸ್ಪಂದಿಸಿ ಪರಿಹಾರ ವ್ಯವಸ್ಥೆ ಕಲ್ಪಿಸದಿದ್ದರೆ ಅನಿರ್ಧಿಷ್ಟ ಧರಣಿ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.<br /> <br /> <strong>ಬೆಳೆ ಸಾಲ: ಅವಧಿ ವಿಸ್ತರಣೆ<br /> ಚಿಕ್ಕೋಡಿ: </strong>ಕೇಂದ್ರ ಹಣಕಾಸು ಸಚಿವಾಲಯದ ಆದೇಶದಂತೆ ಯಾವುದೇ ಬ್ಯಾಂಕು ಅಥವಾ ಸಹಕಾರ ಸಂಘಗಳಿಂದ ಬೆಳೆ ಸಾಲ ಪಡೆಯದೇ ಇರುವ ರೈತರಿಗೆ ಸೆ.30ರ ವರೆಗೆ ಸಾಲ ಪಡೆಯಲು ಅವಕಾಶ ಒದಗಿಸಲಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ಎನ್.ಬಿ. ರೊಟ್ಟಿ ತಿಳಿಸಿದ್ದಾರೆ.<br /> <br /> ತಾಲ್ಲೂಕಿನ ಯಾವುದೇ ಬ್ಯಾಂಕು ಅಥವಾ ಸಹಕಾರ ಸಂಘಗಳಿಂದ ಕೃಷಿ ಅಥವಾ ಬೆಳೆ ಸಾಲ ಪಡೆಯದೇ ಇರುವ ರೈತರು ಸಂಬಂಧಪಟ್ಟ ಗ್ರಾಮದ ಬ್ಯಾಂಕು ಅಥವಾ ಸಹಕಾರಿ ಸಂಘಗಳನ್ನು ಸಂಪರ್ಕಿಸಿ ಸಾಲ ಪಡೆಯಬಹುದು. ಈ ಅವಧಿಯಲ್ಲಿ ಸಾಲ ಪಡೆಯುವ ರೈತರಿಗೆ ಬ್ಯಾಂಕುಗಳಿಂದ ಕೆಲವು ರಿಯಾಯಿತಿ ದೊರಯಲಿವೆ.<br /> <br /> ಸರಳೀಕೃತ ಕೃಷಿ ಅಥವಾ ಬೆಳೆ ಸಾಲ ಅರ್ಜಿ ಫಾರ್ಮ್ಗಳನ್ನು ಜಿಲ್ಲೆ ಎಲ್ಲ ಬ್ಯಾಂಕ್ಗಳ ಶಾಖೆಗಳಲ್ಲಿ ಮತ್ತು ಗ್ರಾಮ ಪಂಚಾಯಿತಿಗಳಲ್ಲಿ ಸಿಗುತ್ತವೆ. ಸೆ.30ರ ಒಳಗಾಗಿ ಕೃಷಿಕರು ಸಾಲ ಪಡೆಯಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>