<p><strong>ಬೆಳಗಾವಿ:</strong> ‘ಜೈಲಿಗೆ ಹೋಗಿ ಬಂದವರು ಎಂಬ ಕೆಲವರ ಕುಹಕ ನುಡಿಗಳಿಗೆ ಕಿವಿಗೊಡಬೇಡಿ. ಸಮಾಜದ ಜತೆಗೆ ಹೊಂದಿಕೊಂಡು ಹೋಗಿ ಜೀವನ ರೂಪಿಸಿಕೊಳ್ಳಿ’ ಎಂದು ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ಅಶೋಕ ನಿಜಗಣ್ಣವರ ಹೇಳಿದರು.<br /> <br /> ಇಲ್ಲಿಗೆ ಸಮೀಪದ ಹಿಂಡಲಗಾ ಕಾರಾಗೃಹದಲ್ಲಿ ಸನ್ನಡತೆ ತೋರಿದ 35 ಕೈದಿಗಳನ್ನು ಸ್ವಾತಂತ್ರ್ಯೋತ್ಸವದ ಅಂಗವಾಗಿ ಬಿಡುಗಡೆಗೊಳಿಸಿದ ಸಮಾರಂಭದಲ್ಲಿ ಅವರು ಮಾತನಾಡಿದರು.<br /> <br /> ಸಾಮಾಜಿಕ ಜೀವನದಲ್ಲಿ ಯಾರದ್ದೂ ಕಸಿಯಬಾರದು ಹಾಗೂ ಯಾರಿಗೂ ತೊಂದರೆ ಕೊಡಬಾರದು ಎಂಬ ನೀತಿ ಅನುಸರಿಸಿದರೆ ಒಳ್ಳೆಯ ಬದುಕು ಸಾಗಿಸಬಹುದು ಎಂದು ಅವರು ಹೇಳಿದರು.<br /> <br /> ಯಾವುದೋ ಕ್ಷಣದಲ್ಲಿ ಮಾಡಿದ ತಪ್ಪಿಗೆ ಬದುಕಿನ ಮಹತ್ವದ ಅವಧಿಯನ್ನು ಕಾರಾಗೃಹದಲ್ಲಿ ಕಳೆಯಬೇಕಾಯಿತು. ಇಲ್ಲಿ ಪಡೆದ ಸುಧಾರಣಾ ಕ್ರಮಗಳನ್ನು ಪಾಲಿಸಿ ಸಮಾಜಮುಖಿಯಾಗಿ ಬದುಕಬೇಕು ಎಂದರು.<br /> <br /> ಜಿಲ್ಲಾಧಿಕಾರಿ ಎನ್. ಜಯರಾಮ್ ಮಾತನಾಡಿ, ಜೀವನದಲ್ಲಿ ಯಾರೂ ಪರಿಪೂರ್ಣರಲ್ಲ, ಕಲಿತು ಹೊಂದಿಕೊಂಡು ಬದುಕು ಕಟ್ಟಿಕೊಳ್ಳಬೇಕು ಎಂದು ಹೇಳಿದರು.<br /> <br /> ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಬಿ.ಆರ್. ರವಿಕಾಂತೇಗೌಡ ಮಾತನಾಡಿ, ಜೈಲುಗಳು ಆತ್ಮಶೋಧನೆ ಕೇಂದ್ರಗಳಾಗಿವೆ. ಈಗ ಬಿಡುಗಡೆಯಾದವರು ಉತ್ತಮ ಬದುಕು ನಡೆಸಬೇಕು ಎಂದರು.<br /> <br /> ಕಾರಾಗೃಹ ಸಲಹಾ ಸಮಿತಿ ಸದಸ್ಯ ವಿಜಯ ಮೋರೆ, ಇದೇ ಸನ್ನಡತೆಯನ್ನು ಜೀವನುದ್ದಕ್ಕೂ ಕಾಪಾಡಿಕೊಂಡು ಎಲ್ಲರ ಗೌರವಕ್ಕೆ ಪಾತ್ರರಾಗಬೇಕು ಎಂದು ಹೇಳಿದರು.<br /> <br /> ಪೊಲೀಸ್ ಆಯುಕ್ತ ಟಿ.ಜಿ. ಕೃಷ್ಣಭಟ್, ಮಾಜಿ ಮೇಯರ್ ಸಿದ್ದನಗೌಡ ಪಾಟೀಲ, ಕವಿತಾ ಕಾಂಬಳೆ ಇತರರು ಉಪಸ್ಥಿತರಿದ್ದರು.<br /> <br /> ಕಾರಾಗೃಹದ ಅಧೀಕ್ಷಕ ಟಿ.ಪಿ. ಶೇಷ ಮಾತನಾಡಿ, ಸನ್ನಡತೆಯ ಹೊಂದಿದ 43 ಕೈದಿಗಳ ಹೆಸರನ್ನು ಸರ್ಕಾರಕ್ಕೆ ಶಿಫಾರಸು ಮಾಡಲಾಗಿತ್ತು. ಅದರಲ್ಲಿ ಇಬ್ಬರು ಮಹಿಳೆಯರೂ ಸೇರಿದಂತೆ 35 ಜನರಿಗೆ ಸರ್ಕಾರ ಬಿಡುಗಡೆಗೊಳಿಸಿದೆ, ಎಲ್ಲರೂ ಸನ್ನಡತೆಯಿಂದ ಬದುಕಿ, ಬಾಳಿ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಜೈಲಿಗೆ ಹೋಗಿ ಬಂದವರು ಎಂಬ ಕೆಲವರ ಕುಹಕ ನುಡಿಗಳಿಗೆ ಕಿವಿಗೊಡಬೇಡಿ. ಸಮಾಜದ ಜತೆಗೆ ಹೊಂದಿಕೊಂಡು ಹೋಗಿ ಜೀವನ ರೂಪಿಸಿಕೊಳ್ಳಿ’ ಎಂದು ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ಅಶೋಕ ನಿಜಗಣ್ಣವರ ಹೇಳಿದರು.<br /> <br /> ಇಲ್ಲಿಗೆ ಸಮೀಪದ ಹಿಂಡಲಗಾ ಕಾರಾಗೃಹದಲ್ಲಿ ಸನ್ನಡತೆ ತೋರಿದ 35 ಕೈದಿಗಳನ್ನು ಸ್ವಾತಂತ್ರ್ಯೋತ್ಸವದ ಅಂಗವಾಗಿ ಬಿಡುಗಡೆಗೊಳಿಸಿದ ಸಮಾರಂಭದಲ್ಲಿ ಅವರು ಮಾತನಾಡಿದರು.<br /> <br /> ಸಾಮಾಜಿಕ ಜೀವನದಲ್ಲಿ ಯಾರದ್ದೂ ಕಸಿಯಬಾರದು ಹಾಗೂ ಯಾರಿಗೂ ತೊಂದರೆ ಕೊಡಬಾರದು ಎಂಬ ನೀತಿ ಅನುಸರಿಸಿದರೆ ಒಳ್ಳೆಯ ಬದುಕು ಸಾಗಿಸಬಹುದು ಎಂದು ಅವರು ಹೇಳಿದರು.<br /> <br /> ಯಾವುದೋ ಕ್ಷಣದಲ್ಲಿ ಮಾಡಿದ ತಪ್ಪಿಗೆ ಬದುಕಿನ ಮಹತ್ವದ ಅವಧಿಯನ್ನು ಕಾರಾಗೃಹದಲ್ಲಿ ಕಳೆಯಬೇಕಾಯಿತು. ಇಲ್ಲಿ ಪಡೆದ ಸುಧಾರಣಾ ಕ್ರಮಗಳನ್ನು ಪಾಲಿಸಿ ಸಮಾಜಮುಖಿಯಾಗಿ ಬದುಕಬೇಕು ಎಂದರು.<br /> <br /> ಜಿಲ್ಲಾಧಿಕಾರಿ ಎನ್. ಜಯರಾಮ್ ಮಾತನಾಡಿ, ಜೀವನದಲ್ಲಿ ಯಾರೂ ಪರಿಪೂರ್ಣರಲ್ಲ, ಕಲಿತು ಹೊಂದಿಕೊಂಡು ಬದುಕು ಕಟ್ಟಿಕೊಳ್ಳಬೇಕು ಎಂದು ಹೇಳಿದರು.<br /> <br /> ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಬಿ.ಆರ್. ರವಿಕಾಂತೇಗೌಡ ಮಾತನಾಡಿ, ಜೈಲುಗಳು ಆತ್ಮಶೋಧನೆ ಕೇಂದ್ರಗಳಾಗಿವೆ. ಈಗ ಬಿಡುಗಡೆಯಾದವರು ಉತ್ತಮ ಬದುಕು ನಡೆಸಬೇಕು ಎಂದರು.<br /> <br /> ಕಾರಾಗೃಹ ಸಲಹಾ ಸಮಿತಿ ಸದಸ್ಯ ವಿಜಯ ಮೋರೆ, ಇದೇ ಸನ್ನಡತೆಯನ್ನು ಜೀವನುದ್ದಕ್ಕೂ ಕಾಪಾಡಿಕೊಂಡು ಎಲ್ಲರ ಗೌರವಕ್ಕೆ ಪಾತ್ರರಾಗಬೇಕು ಎಂದು ಹೇಳಿದರು.<br /> <br /> ಪೊಲೀಸ್ ಆಯುಕ್ತ ಟಿ.ಜಿ. ಕೃಷ್ಣಭಟ್, ಮಾಜಿ ಮೇಯರ್ ಸಿದ್ದನಗೌಡ ಪಾಟೀಲ, ಕವಿತಾ ಕಾಂಬಳೆ ಇತರರು ಉಪಸ್ಥಿತರಿದ್ದರು.<br /> <br /> ಕಾರಾಗೃಹದ ಅಧೀಕ್ಷಕ ಟಿ.ಪಿ. ಶೇಷ ಮಾತನಾಡಿ, ಸನ್ನಡತೆಯ ಹೊಂದಿದ 43 ಕೈದಿಗಳ ಹೆಸರನ್ನು ಸರ್ಕಾರಕ್ಕೆ ಶಿಫಾರಸು ಮಾಡಲಾಗಿತ್ತು. ಅದರಲ್ಲಿ ಇಬ್ಬರು ಮಹಿಳೆಯರೂ ಸೇರಿದಂತೆ 35 ಜನರಿಗೆ ಸರ್ಕಾರ ಬಿಡುಗಡೆಗೊಳಿಸಿದೆ, ಎಲ್ಲರೂ ಸನ್ನಡತೆಯಿಂದ ಬದುಕಿ, ಬಾಳಿ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>