<p>ಬೆಳಗಾವಿ: ‘ವ್ಯಕ್ತಿ- ವ್ಯಕ್ತಿಗಳ ಸಂಬಂಧಗಳನ್ನು ಪರಸ್ಪರರನ್ನು ಗೌರವಿಸಬೇಕು. ಅದನ್ನು ಅಲಕ್ಷಿಸಿದರೂ ಮಾನವ ಹಕ್ಕುಗಳ ಮೇಲೆ ಮಾಡುವ ದುರಾಕ್ರಮಣವಾಗುತ್ತದೆ. ಈ ದಿಸೆಯಲ್ಲಿ ಹೆಚ್ಚಾಗಿ ಮಕ್ಕಳು ಹಾಗೂ ಮಹಿಳೆಯರ ಮೇಲೆ ಪದೇ ಪದೇ ಮಾನವ ಹಕ್ಕುಗಳ ಉಲ್ಲಂಘನೆಯ ಪ್ರಕರಣಗಳು ವರದಿಯಾಗುತ್ತಿರುವುದು ವಿಷಾದನೀಯ’ ಎಂದು ಜಿಲ್ಲಾ ನ್ಯಾಯಾಧೀಶ ಪಿ.ಕೃಷ್ಣ ಭಟ್ ಹೇಳಿದರು. <br /> <br /> ಇಲ್ಲಿನ ಕುಮಾರ ಗಂಧರ್ವ ರಂಗಮಂದಿರದಲ್ಲಿ ಜಿಲ್ಲಾಡಳಿತ ಹಾಗೂ ರಾಜ್ಯ ಮಾನವ ಹಕ್ಕುಗಳ ಆಯೋಗದ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ನಡೆದ ವಿಶ್ವಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ದೇಶದಲ್ಲಿ ಕಾನೂನುಗಳ ಅನುಷ್ಠಾನ ಪರಿಣಾಮಕಾರಿಯಾಗಿ ಜಾರಿಯಾಗಬೇಕು. ಅದು ಸಾರ್ವತ್ರಿಕ ಮತ್ತು ಸಮಾನವಾಗಿರಬೇಕಾದ್ದು ಅವಶ್ಯವಾಗಿದೆ ಎಂದ ಅವರು, ಅಧಿಕಾರ ಮಟ್ಟದಲ್ಲಿ ಕರ್ತವ್ಯದ ಬಗ್ಗೆ ಗಾಂಭೀರ್ಯದ ಕೊರತೆ ಎದ್ದು ಕಾಣುತ್ತಿದೆ. ಹೀಗಾಗಿ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ ಎಂದರು.<br /> <br /> ಆಡಳಿತದಲ್ಲಿ ಭ್ರಷ್ಟಾಚಾರದ ಅತಿಕ್ರಮಣ ಹೆಚ್ಚಾಗುತ್ತಿರುವದು ತಿಳಿದ ಸಂಗತಿಯಾಗಿದ್ದು, ಮಾನವ ಹಕ್ಕುಗಳ ಉಲ್ಲಂಘನೆಗೆ ಇದು ಮೂಲ ಕಾರಣವಾಗಿದೆ. ಮಾನವ ಹಕ್ಕುಗಳನ್ನು ಗೌರವಿಸುವ ಮನೋಭಾವ ಪ್ರತಿಯೊಬ್ಬರು ರೂಢಿಸಿಕೊಂಡಾಗ ಮಾತ್ರ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಆಚರಿಸುತ್ತಿರುವದು ಸಾರ್ಥಕವಾಗುತ್ತದೆ ಎಂದು ಹೇಳಿದರು.<br /> <br /> ಬೆಳಗಾವಿ ವಕೀಲರ ಸಂಘದ ಅಧ್ಯಕ್ಷ ಎ.ಜಿ. ಮುಳವಾಡಮಠ ಮಾತನಾಡಿ, ಹೆಚ್ಚಾಗಿ ಮಾನವರಲ್ಲಿ ಸ್ವಾರ್ಥ, ಆಸೆ, ಮೌಢ್ಯತೆಗಳಿಂದ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ. 12ನೇ ಶತಮಾನದಲ್ಲಿ ಮಾನವ ಹಕ್ಕುಗಳ ಕುರಿತು ಕಲ್ಪನೆ ಇತ್ತು. ವಚನ, ದಿವ್ಯ ಸಂದೇಶ ಹಾಗೂ ಪುರಾಣಗಳಲ್ಲಿ ಈ ಕುರಿತು ಉಲ್ಲೇಖವಿರುವದು ಕಂಡು ಬರುತ್ತದೆ ಎಂದರು.<br /> <br /> ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಎನ್.ಜಯರಾಂ, 850 ವರ್ಷಗಳ ಹಿಂದೆ ಮಾನವ ಹಕ್ಕು ಕುರಿತು ಪರಿಕಲ್ಪನೆ ಇತ್ತು. ಆ ಕುರಿತು ಶಾಸನಗಳಲ್ಲಿ ಉಲ್ಲೇಖಗಳಿವೆ. ಆ ಕಾಲದಲ್ಲಿ ನಮ್ಮ ರಾಜ್ಯ ಮುಂಚೂಣಿಯಲ್ಲಿರುವದನ್ನು ಗಮನಿಸಬಹುದಾಗಿದೆ. ಮಾನವನು ಘನತೆ ಹಾಗೂ ಗೌರವದಿಂದ ಬಾಳಲು ಭೌತಿಕ ಸಂಪತ್ತು ಸರಿ ಸಮಾನ ಹಂಚಿಕೆಯಾಗಬೇಕು. ಈ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಅವಶ್ಯಕತೆ ಇದೆ ಎಂದು ಹೇಳಿದರು.<br /> <br /> ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದೀಪಾ ಚೋಳನ್ ಹಾಗೂ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಪ್ರವೀಣಕುಮಾರ ಸ್ವಾಗತಿಸಿದರು. ವಿದ್ಯಾ ಭಜಂತ್ರಿ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಳಗಾವಿ: ‘ವ್ಯಕ್ತಿ- ವ್ಯಕ್ತಿಗಳ ಸಂಬಂಧಗಳನ್ನು ಪರಸ್ಪರರನ್ನು ಗೌರವಿಸಬೇಕು. ಅದನ್ನು ಅಲಕ್ಷಿಸಿದರೂ ಮಾನವ ಹಕ್ಕುಗಳ ಮೇಲೆ ಮಾಡುವ ದುರಾಕ್ರಮಣವಾಗುತ್ತದೆ. ಈ ದಿಸೆಯಲ್ಲಿ ಹೆಚ್ಚಾಗಿ ಮಕ್ಕಳು ಹಾಗೂ ಮಹಿಳೆಯರ ಮೇಲೆ ಪದೇ ಪದೇ ಮಾನವ ಹಕ್ಕುಗಳ ಉಲ್ಲಂಘನೆಯ ಪ್ರಕರಣಗಳು ವರದಿಯಾಗುತ್ತಿರುವುದು ವಿಷಾದನೀಯ’ ಎಂದು ಜಿಲ್ಲಾ ನ್ಯಾಯಾಧೀಶ ಪಿ.ಕೃಷ್ಣ ಭಟ್ ಹೇಳಿದರು. <br /> <br /> ಇಲ್ಲಿನ ಕುಮಾರ ಗಂಧರ್ವ ರಂಗಮಂದಿರದಲ್ಲಿ ಜಿಲ್ಲಾಡಳಿತ ಹಾಗೂ ರಾಜ್ಯ ಮಾನವ ಹಕ್ಕುಗಳ ಆಯೋಗದ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ನಡೆದ ವಿಶ್ವಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ದೇಶದಲ್ಲಿ ಕಾನೂನುಗಳ ಅನುಷ್ಠಾನ ಪರಿಣಾಮಕಾರಿಯಾಗಿ ಜಾರಿಯಾಗಬೇಕು. ಅದು ಸಾರ್ವತ್ರಿಕ ಮತ್ತು ಸಮಾನವಾಗಿರಬೇಕಾದ್ದು ಅವಶ್ಯವಾಗಿದೆ ಎಂದ ಅವರು, ಅಧಿಕಾರ ಮಟ್ಟದಲ್ಲಿ ಕರ್ತವ್ಯದ ಬಗ್ಗೆ ಗಾಂಭೀರ್ಯದ ಕೊರತೆ ಎದ್ದು ಕಾಣುತ್ತಿದೆ. ಹೀಗಾಗಿ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ ಎಂದರು.<br /> <br /> ಆಡಳಿತದಲ್ಲಿ ಭ್ರಷ್ಟಾಚಾರದ ಅತಿಕ್ರಮಣ ಹೆಚ್ಚಾಗುತ್ತಿರುವದು ತಿಳಿದ ಸಂಗತಿಯಾಗಿದ್ದು, ಮಾನವ ಹಕ್ಕುಗಳ ಉಲ್ಲಂಘನೆಗೆ ಇದು ಮೂಲ ಕಾರಣವಾಗಿದೆ. ಮಾನವ ಹಕ್ಕುಗಳನ್ನು ಗೌರವಿಸುವ ಮನೋಭಾವ ಪ್ರತಿಯೊಬ್ಬರು ರೂಢಿಸಿಕೊಂಡಾಗ ಮಾತ್ರ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಆಚರಿಸುತ್ತಿರುವದು ಸಾರ್ಥಕವಾಗುತ್ತದೆ ಎಂದು ಹೇಳಿದರು.<br /> <br /> ಬೆಳಗಾವಿ ವಕೀಲರ ಸಂಘದ ಅಧ್ಯಕ್ಷ ಎ.ಜಿ. ಮುಳವಾಡಮಠ ಮಾತನಾಡಿ, ಹೆಚ್ಚಾಗಿ ಮಾನವರಲ್ಲಿ ಸ್ವಾರ್ಥ, ಆಸೆ, ಮೌಢ್ಯತೆಗಳಿಂದ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ. 12ನೇ ಶತಮಾನದಲ್ಲಿ ಮಾನವ ಹಕ್ಕುಗಳ ಕುರಿತು ಕಲ್ಪನೆ ಇತ್ತು. ವಚನ, ದಿವ್ಯ ಸಂದೇಶ ಹಾಗೂ ಪುರಾಣಗಳಲ್ಲಿ ಈ ಕುರಿತು ಉಲ್ಲೇಖವಿರುವದು ಕಂಡು ಬರುತ್ತದೆ ಎಂದರು.<br /> <br /> ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಎನ್.ಜಯರಾಂ, 850 ವರ್ಷಗಳ ಹಿಂದೆ ಮಾನವ ಹಕ್ಕು ಕುರಿತು ಪರಿಕಲ್ಪನೆ ಇತ್ತು. ಆ ಕುರಿತು ಶಾಸನಗಳಲ್ಲಿ ಉಲ್ಲೇಖಗಳಿವೆ. ಆ ಕಾಲದಲ್ಲಿ ನಮ್ಮ ರಾಜ್ಯ ಮುಂಚೂಣಿಯಲ್ಲಿರುವದನ್ನು ಗಮನಿಸಬಹುದಾಗಿದೆ. ಮಾನವನು ಘನತೆ ಹಾಗೂ ಗೌರವದಿಂದ ಬಾಳಲು ಭೌತಿಕ ಸಂಪತ್ತು ಸರಿ ಸಮಾನ ಹಂಚಿಕೆಯಾಗಬೇಕು. ಈ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಅವಶ್ಯಕತೆ ಇದೆ ಎಂದು ಹೇಳಿದರು.<br /> <br /> ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದೀಪಾ ಚೋಳನ್ ಹಾಗೂ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಪ್ರವೀಣಕುಮಾರ ಸ್ವಾಗತಿಸಿದರು. ವಿದ್ಯಾ ಭಜಂತ್ರಿ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>