ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಹಲವು ವ್ಯಕ್ತಿಗಳು ನಗರಾಭಿವೃದ್ಧಿ ಪ್ರಾಧಿಕಾರದಿಂದ ಅನುಮತಿ ಪಡೆಯದೇ ಮನೆಗಳನ್ನು ಕಟ್ಟಿಕೊಂಡಿರುತ್ತಾರೆ. ಇವುಗಳಿಗೆ ವಿದ್ಯುತ್, ಕುಡಿಯುವ ನೀರಿನ ಸಂಪರ್ಕ ಕೂಡ ನೀಡಲಾಗಿರುತ್ತದೆ. ಇಂತಹ ಮನೆಗಳನ್ನು ತೆರವುಗೊಳಿಸಲು ಬರುವುದಿಲ್ಲ. ಹೀಗಾಗಿ ಇವುಗಳನ್ನು ಸಕ್ರಮಗೊಳಿಸಿದರೆ ಸರ್ಕಾರಕ್ಕೆ ಒಂದಿಷ್ಟು ಆದಾಯವೂ ಬರುತ್ತದೆ. ಇದರ ಬಗ್ಗೆ ಚಿಂತನೆ ನಡೆದಿದೆ’ ಎಂದು ತಿಳಿಸಿದರು.