ಕಾಲೇಜಿನ ಪ್ರಾಂಶುಪಾಲ ಎಸ್.ಎಂ.ಶಶಿಧರ್, ‘ರಕ್ತಕ್ಕೆ ಬೇರೆ ಪರ್ಯಾಯವಿಲ್ಲ. ವೈದ್ಯಲೋಕ ಸಾಕಷ್ಟು ಮುಂದುವರಿದಿದ್ದು, ಕೃತಕ ಅಂಗಾಂಗಗಳನ್ನು ಕಸಿ ಮಾಡಿಯೂ ಆಗಿದೆ. ಆದರೆ, ಕೃತಕ ರಕ್ತ ಸೃಷ್ಟಿ ಸಾಧ್ಯವಾಗಿಲ್ಲ. ಎಷ್ಟೇ ಕೋಟಿ ಕೊಟ್ಟರೂ ರಕ್ತ ಸೃಷ್ಟಿ ಮಾಡಲಾಗುವುದಿಲ್ಲ. ಹೀಗಾಗಿ ರಕ್ತದಾನದ ಮೂಲಕ ಬೇಡಿಕೆಯನ್ನು ಪೂರೈಸಬಹುದು. ಈ ನಿಟ್ಟಿನಲ್ಲಿ ಜನರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಬೇಕು’ ಎಂದು ತಿಳಿಸಿದರು.