ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯುತ್‌ ಸ್ಪರ್ಷದಿಂದ ಕಲಾವಿದ ಸಾರಥಿ ಪಂಪಾಪತಿ ಹಾಗೂ ಅವರ ಪತ್ನಿ ಸಾವು

Last Updated 28 ಆಗಸ್ಟ್ 2022, 15:17 IST
ಅಕ್ಷರ ಗಾತ್ರ

ಬಳ್ಳಾರಿ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಯಲಾಟ ಕಲಾವಿದ ಸಾರಥಿ ಪಂಪಾಪತಿ (68) ಮತ್ತು ಅವರ ಪತ್ನಿ ದ್ಯಾಮವ್ವ (66) ವಿದ್ಯುತ್‌ ಸ್ಪರ್ಷದಿಂದ ಭಾನುವಾರ ಸಂಜೆ ಮೃತಪಟ್ಟಿದ್ದಾರೆ.

ನಗರದ ಬಂಡಿಹಟ್ಟಿಯಲ್ಲಿರುವ ತಮ್ಮ ಮನೆಯ ಮಾಳಿಗೆ ಮೇಲೆ ನಿಂತಿದ್ದ ಮಳೆ ನೀರು ಹೊರ ಹಾಕಲು ಸಂಜೆ 4.30ರ ಸುಮಾರಿಗೆ ಹೋಗಿದ್ದಾಗ ಕಂಬದಿಂದ ಬಂದಿದ್ದ ಸರ್ವಿಸ್‌ ವೈರ್‌ನಿಂದ ವಿದ್ಯುತ್‌ ಸ್ಪರ್ಷವಾಗಿ ಇಬ್ಬರೂ ತೀವ್ರವಾಗಿ ಗಾಯಗೊಂಡರು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಿದರೂ ಪ್ರಯೋಜನವಾಗಲಿಲ್ಲ.

ಮೃತ ದಂಪತಿಗೆ ಇಬ್ಬರು ಗಂಡು ಹಾಗೂ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಬಳ್ಳಾರಿ, ಸುತ್ತಮುತ್ತಲ ಪ್ರದೇಶಗಳಲ್ಲಿ ಚಿರ‍ಪರಿಚಿತರಾಗಿದ್ದ ಪಂಪಾಪತಿ ಎರಡು ಸಾವಿರಕ್ಕೂ ಹೆಚ್ಚು ಬಯಲಾಟ ಪ್ರದರ್ಶನ ನೀಡಿದ್ದಾರೆ. ಸಾರಥಿ ಪಾತ್ರದಿಂದ ಅವರು ಚಿರಪರಿಚಿತರಾಗಿದ್ದರು. 2018ರಲ್ಲಿ ರಾಜ್ಯ ಸರ್ಕಾರವು ಪಂಪಾಪತಿ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿತ್ತು.

ಮೃತರ ಅಂತ್ಯಸಂಸ್ಕಾರ ಸೋಮವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಕೌಲ್‌ಬಜಾರ್‌ನಲ್ಲಿರುವ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT