ಈಗಾಗಲೇ ಜಿಲ್ಲೆಯಲ್ಲಿರುವ ಕೆರೆಗಳಿಂದ ಹೂಳು ತೆಗೆದು, ಅವುಗಳನ್ನು ಅಭಿವೃದ್ಧಿ ಪಡಿಸಲಾಗಿದೆ. ಹೊಸ ಕೆರೆಗಳನ್ನು ನಿರ್ಮಿಸಿ, ಅಂತರ್ಜಲವನ್ನು ಇನ್ನಷ್ಟು ಹೆಚ್ಚಿಸುವುದು ಯೋಜನೆಯ ಮುಖ್ಯ ಉದ್ದೇಶವಾಗಿದೆ. ಅಂತರ್ಜಲ ಮಟ್ಟ ಹೆಚ್ಚಾದರೆ ಗ್ರಾಮೀಣ ಭಾಗಗಳಲ್ಲಿ ಜನರು ಎದುರಿಸುತ್ತಿರುವ ತೊಂದರೆ ಶಾಶ್ವತವಾಗಿ ದೂರವಾಗಲಿದೆ. ಜಲ ಸಂರಕ್ಷಣೆಯಿಂದ ಕೃಷಿ ಚಟುವಟಿಕೆಗಳಿಗೆ ಮತ್ತಷ್ಟು ಪ್ರೋತ್ಸಾಹ ಸಿಕ್ಕಂತಾಗುತ್ತದೆ. ಸ್ಥಳೀಯವಾಗಿ ಉದ್ಯೋಗ ಪಡೆದು, ಸ್ವಾವಲಂಬನೆ ಬರುತ್ತದೆ. ಮಳೆಯ ಅವಲಂಬನೆ ದೂರವಾಗುತ್ತದೆ. ಅರಣ್ಯೀಕರಣ ಅಭಿವೃದ್ಧಿ, ಪರಿಸರದಲ್ಲಿ ಸಮತೋಲನ ಉಂಟಾದರೆ ಗ್ರಾಮೀಣರ ಆರೋಗ್ಯ ಸುಧಾರಿಸುತ್ತದೆ ಎಂಬ ದೂರದೃಷ್ಟಿಯಿಂದ ಈ ಯೋಜನೆ ರೂಪಿಸಲಾಗಿದೆ.