‘ಕೆಲವು ಕಡತಗಳು ಒಂದು ವರ್ಷ, ಕೆಲವು ಆರು ತಿಂಗಳಿಂದ ವಿಲೇವಾರಿ ಆಗದೇ ಬಾಕಿ ಉಳಿದಿದ್ದವು. ಅವುಗಳನ್ನು ಕಡತ ವಿಲೇವಾರಿ ಸಪ್ತಾಹದಲ್ಲಿ ವಿಲೇವಾರಿ ಮಾಡಲಾಗಿದೆ. ರಜಾ ದಿನವಾದ ಭಾನುವಾರ ಕೂಡ ಕಚೇರಿಯ ಸಿಬ್ಬಂದಿ ಕಷ್ಟಪಟ್ಟು ಕೆಲಸ ನಿರ್ವಹಿಸಿದ್ದಾರೆ. ಮಿಕ್ಕುಳಿದ 680 ಕಡತಗಳನ್ನು ಶೀಘ್ರದಲ್ಲೇ ವಿಲೇವಾರಿ ಮಾಡಲಾಗುವುದು’ ಎಂದು ತಹಶೀಲ್ದಾರ್ ಎಚ್. ವಿಶ್ವನಾಥ್ ‘ಪ್ರಜಾವಾಣಿ’ಗೆ ತಿಳಿಸಿದರು.