<p><strong>ಹೊಸಪೇಟೆ:</strong> ರಾಜ್ಯದಲ್ಲಿ ಬೇರೂರಿರುವ ಡ್ರಗ್ಸ್ ಜಾಲ ಮಟ್ಟ ಹಾಕಲು ರಾಜ್ಯ ಸರ್ಕಾರ ಕಠಿಣ ಕಾನೂನು ಜಾರಿಗೆ ತರಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಆಗ್ರಹಿಸಿದೆ.</p>.<p>ಈ ಸಂಬಂಧ ಪರಿಷತ್ತಿನ ಕಾರ್ಯಕರ್ತರು ಸೋಮವಾರ ಗೃಹಸಚಿವ ಬಸವರಾಜ ಬೊಮ್ಮಾಯಿ ಅವರ ಹೆಸರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಎಚ್. ವಿಶ್ವನಾಥ್ ಅವರಿಗೆ ಸಲ್ಲಿಸಿ ಒತ್ತಾಯಿಸಿದರು.</p>.<p>ಮಾದಕ ವಸ್ತುಗಳ ಪಿಡುಗು ರಾಜ್ಯದಲ್ಲಿ ಹೆಚ್ಚಿರುವುದು ದುರದೃಷ್ಟಕರ. ಯುವ ಸಮೂಹವನ್ನು ಗುರಿಯಾಗಿರಿಸಿ ಈ ದಂಧೆಯನ್ನು ರಾಜ್ಯದಲ್ಲಿ ನಡೆಸಲಾಗುತ್ತಿದ್ದು, ಅನೇಕರು ಅದರ ವ್ಯಸನಿಗಳಾಗುತ್ತಿದ್ದಾರೆ. ಸಿನಿಮಾ ಜಗತ್ತಿನವರು ಇದಕ್ಕೆ ಹೊರತಾಗಿಲ್ಲ. ಈ ಕುರಿತು ಯುವ ಪೀಳಿಗೆಯಲ್ಲಿ ಅರಿವು ಮೂಡಿಸಲು ಪರಿಷತ್ತಿನಿಂದ ರಾಜ್ಯದಾದ್ಯಂತ ‘ಡ್ರಗ್ಸ್ ಮುಕ್ತ ಕರ್ನಾಟಕ’ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.</p>.<p>ಯುವಸಮೂಹವನ್ನು ಡ್ರಗ್ಸ್ ವ್ಯಸನಕ್ಕೆ ದೂಡುವುದಲ್ಲದೇ ಭಯೋತ್ಪಾದಕರು ಅದರ ಮೂಲಕ ದೇಶವನ್ನು ಹಾಳು ಮಾಡುವ ಸಂಚು ರೂಪಿಸಿದ್ದಾರೆ. ಅದರಲ್ಲೂ ಪ್ರತಿಷ್ಠಿತ ಕಾಲೇಜುಗಳ ಕ್ಯಾಂಪಸ್ಗಳನ್ನು ಗುರಿ ಮಾಡಲಾಗುತ್ತಿದೆ. ಹಾಗಾಗಿ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.</p>.<p>ಪರಿಷತ್ತಿನ ರಾಜ್ಯ ಕಾರ್ಯದರ್ಶಿ ಪ್ರತೀಕ ಮಾಳಿ ಹಾಗೂ ಕಾರ್ಯಕರ್ತರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ:</strong> ರಾಜ್ಯದಲ್ಲಿ ಬೇರೂರಿರುವ ಡ್ರಗ್ಸ್ ಜಾಲ ಮಟ್ಟ ಹಾಕಲು ರಾಜ್ಯ ಸರ್ಕಾರ ಕಠಿಣ ಕಾನೂನು ಜಾರಿಗೆ ತರಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಆಗ್ರಹಿಸಿದೆ.</p>.<p>ಈ ಸಂಬಂಧ ಪರಿಷತ್ತಿನ ಕಾರ್ಯಕರ್ತರು ಸೋಮವಾರ ಗೃಹಸಚಿವ ಬಸವರಾಜ ಬೊಮ್ಮಾಯಿ ಅವರ ಹೆಸರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಎಚ್. ವಿಶ್ವನಾಥ್ ಅವರಿಗೆ ಸಲ್ಲಿಸಿ ಒತ್ತಾಯಿಸಿದರು.</p>.<p>ಮಾದಕ ವಸ್ತುಗಳ ಪಿಡುಗು ರಾಜ್ಯದಲ್ಲಿ ಹೆಚ್ಚಿರುವುದು ದುರದೃಷ್ಟಕರ. ಯುವ ಸಮೂಹವನ್ನು ಗುರಿಯಾಗಿರಿಸಿ ಈ ದಂಧೆಯನ್ನು ರಾಜ್ಯದಲ್ಲಿ ನಡೆಸಲಾಗುತ್ತಿದ್ದು, ಅನೇಕರು ಅದರ ವ್ಯಸನಿಗಳಾಗುತ್ತಿದ್ದಾರೆ. ಸಿನಿಮಾ ಜಗತ್ತಿನವರು ಇದಕ್ಕೆ ಹೊರತಾಗಿಲ್ಲ. ಈ ಕುರಿತು ಯುವ ಪೀಳಿಗೆಯಲ್ಲಿ ಅರಿವು ಮೂಡಿಸಲು ಪರಿಷತ್ತಿನಿಂದ ರಾಜ್ಯದಾದ್ಯಂತ ‘ಡ್ರಗ್ಸ್ ಮುಕ್ತ ಕರ್ನಾಟಕ’ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.</p>.<p>ಯುವಸಮೂಹವನ್ನು ಡ್ರಗ್ಸ್ ವ್ಯಸನಕ್ಕೆ ದೂಡುವುದಲ್ಲದೇ ಭಯೋತ್ಪಾದಕರು ಅದರ ಮೂಲಕ ದೇಶವನ್ನು ಹಾಳು ಮಾಡುವ ಸಂಚು ರೂಪಿಸಿದ್ದಾರೆ. ಅದರಲ್ಲೂ ಪ್ರತಿಷ್ಠಿತ ಕಾಲೇಜುಗಳ ಕ್ಯಾಂಪಸ್ಗಳನ್ನು ಗುರಿ ಮಾಡಲಾಗುತ್ತಿದೆ. ಹಾಗಾಗಿ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.</p>.<p>ಪರಿಷತ್ತಿನ ರಾಜ್ಯ ಕಾರ್ಯದರ್ಶಿ ಪ್ರತೀಕ ಮಾಳಿ ಹಾಗೂ ಕಾರ್ಯಕರ್ತರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>