ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ದಾರಿಹೋಕನಿಗೆ ಡಿಕ್ಕಿ: ಸಾವು

Last Updated 10 ಏಪ್ರಿಲ್ 2020, 13:51 IST
ಅಕ್ಷರ ಗಾತ್ರ

ಹೊಸಪೇಟೆ: ತಾಲ್ಲೂಕಿನ ಮಲಪನಗುಡಿ ಬಳಿ ಶುಕ್ರವಾರ ದ್ವಿಚಕ್ರ ವಾಹನ ಸವಾರ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ದಾರಿಹೋಕನಿಗೆ ಡಿಕ್ಕಿ ಹೊಡೆದಿದ್ದರಿಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ತಾಲ್ಲೂಕಿನ ಗಾಳೆಮ್ಮನಗುಡಿಯ ರಾಮಪ್ಪ (60) ಮೃತರು.

‘ರಾಮಪ್ಪ ಅವರು ಶುಕ್ರವಾರ ಮಧ್ಯಾಹ್ನ ಪಡಿತರ ತೆಗೆದುಕೊಂಡು ಹೋಗಲು ಮಲಪನಗುಡಿಗೆ ಬಂದಿದ್ದರು. ರಸ್ತೆ ದಾಟಿಕೊಂಡು ಹೋಗುವಾಗ ಈ ವೇಳೆ ಕಮಲಾಪುರದಿಂದ ನಗರದ ಕಡೆಗೆ ದ್ವಿಚಕ್ರ ವಾಹನದ ಮೇಲೆ ಇಬ್ಬರು ಯುವಕರು ಬರುತ್ತಿದ್ದರು. ಅವರನ್ನು ತಡೆಯಲೆತ್ನಿಸಿದಾಗ ತಪ್ಪಿಸಿಕೊಂಡು ಹೋಗುವ ಭರದಲ್ಲಿ ನಿಯಂತ್ರಣ ತ‍ಪ್ಪಿರಾಮಪ್ಪ ಅವರಿಗೆ ಡಿಕ್ಕಿ ಹೊಡೆದಿದ್ದಾರೆ. ತೀವ್ರ ರಕ್ತಸ್ರಾವವಾಗಿ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ’ ಎಂದು ಪೊಲೀಸ್‌ ಅಧಿಕಾರಿ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

‘ಬೈಕ್‌ ಸವಾರ ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಬಳ್ಳಾರಿಯ ವಿಮ್ಸ್‌ಗೆ ಕಳುಹಿಸಿಕೊಡಲಾಗಿದೆ. ಯುವಕರುಇಲ್ಲಿನ ಪಟೇಲ್‌ ನಗರದ ನಿವಾಸಿ ಎಂದು ಗೊತ್ತಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT