‘ರಾಮಪ್ಪ ಅವರು ಶುಕ್ರವಾರ ಮಧ್ಯಾಹ್ನ ಪಡಿತರ ತೆಗೆದುಕೊಂಡು ಹೋಗಲು ಮಲಪನಗುಡಿಗೆ ಬಂದಿದ್ದರು. ರಸ್ತೆ ದಾಟಿಕೊಂಡು ಹೋಗುವಾಗ ಈ ವೇಳೆ ಕಮಲಾಪುರದಿಂದ ನಗರದ ಕಡೆಗೆ ದ್ವಿಚಕ್ರ ವಾಹನದ ಮೇಲೆ ಇಬ್ಬರು ಯುವಕರು ಬರುತ್ತಿದ್ದರು. ಅವರನ್ನು ತಡೆಯಲೆತ್ನಿಸಿದಾಗ ತಪ್ಪಿಸಿಕೊಂಡು ಹೋಗುವ ಭರದಲ್ಲಿ ನಿಯಂತ್ರಣ ತಪ್ಪಿರಾಮಪ್ಪ ಅವರಿಗೆ ಡಿಕ್ಕಿ ಹೊಡೆದಿದ್ದಾರೆ. ತೀವ್ರ ರಕ್ತಸ್ರಾವವಾಗಿ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ’ ಎಂದು ಪೊಲೀಸ್ ಅಧಿಕಾರಿ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.