<p><strong>ಹೊಸಪೇಟೆ: </strong>ಜಿಲ್ಲಾ ಖನಿಜ ನಿಧಿ ಅನುದಾನದಿಂದ ನಗರದ ನೂರು ಹಾಸಿಗೆ ಸರ್ಕಾರಿ ಆಸ್ಪತ್ರೆಯ ಖಾಲಿ ಜಾಗದಲ್ಲಿ 250 ಹಾಸಿಗೆಯ ಸುಸಜ್ಜಿತ ಆಸ್ಪತ್ರೆ ನಿರ್ಮಾಣಕ್ಕೆ ರೂಪುರೇಷೆ ತಯಾರಿಸಲಾಗುತ್ತಿದೆ.</p>.<p>ಜಿಲ್ಲಾಧಿಕಾರಿ ಎಸ್.ಎಸ್. ನಕುಲ್, ಶಾಸಕ ಆನಂದ್ ಸಿಂಗ್ ಸಮ್ಮುಖದಲ್ಲಿ ಶುಕ್ರವಾರ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು. ನುರಿತ ವೈದ್ಯರು, ಎಂಜಿನಿಯರ್ಗಳ ಸಲಹೆ ಪಡೆದು ಯಾವುದೇ ಕೊರತೆ ಉಂಟಾಗದ ರೀತಿಯಲ್ಲಿ ಕಟ್ಟಡ ನಿರ್ಮಿಸುವುದರ ಬಗ್ಗೆ ಸುದೀರ್ಘವಾಗಿ ಚರ್ಚಿಸಲಾಯಿತು.</p>.<p>‘ಒಂದು ಸುಸಜ್ಜಿತವಾದ ಆಸ್ಪತ್ರೆಗೆ ಏನೆಲ್ಲ ಬೇಕೋ ಅದೆಲ್ಲ ಇರಬೇಕು. ಆ ರೀತಿ ನೀಲ ನಕ್ಷೆ ಸಿದ್ಧಪಡಿಸಿ, ಅಂದಾಜು ವೆಚ್ಚ ತಯಾರಿಸಬೇಕು’ ಎಂದು ನಕುಲ್ ಅವರು ಎಂಜಿನಿಯರ್ಗಳಿಗೆ ನಿರ್ದೇಶನ ನೀಡಿದರು.</p>.<p>ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ, ‘₹104 ಕೋಟಿ ವೆಚ್ಚದಲ್ಲಿ 250 ಹಾಸಿಗೆ ಆಸ್ಪತ್ರೆ ನಿರ್ಮಿಸಲು ಉದ್ದೇಶಿಸಲಾಗಿದೆ. ಈ ಕುರಿತು ಪ್ರಾಥಮಿಕ ಹಂತದಲ್ಲಿ ಚರ್ಚೆ ನಡೆಸಿದ್ದೇವೆ. ಜನಪ್ರತಿನಿಧಿಗಳು, ತಜ್ಞರಿಂದ ಸಲಹೆ ಪಡೆಯಲಾಗಿದೆ. ಒಟ್ಟಾರೆ ನಾಲ್ಕು ಅಂತಸ್ತಿನ ಆಸ್ಪತ್ರೆ ಇದಾಗಲಿದೆ. ಪ್ರಸ್ತಾವ ಸಿದ್ಧಪಡಿಸಿ ರಾಜ್ಯ ಸರ್ಕಾರಕ್ಕೆ ಕಳುಹಿಸಿಕೊಡಲಾಗುವುದು. ರಾಜ್ಯ ಸಚಿವ ಸಂಪುಟದಲ್ಲಿ ಒಪ್ಪಿಗೆ ಸಿಕ್ಕ ನಂತರ ಕೆಲಸ ಆರಂಭಿಸಲಾಗುವುದು’ ಎಂದು ಹೇಳಿದರು.</p>.<p>‘ಹೊಸದಾಗಿ ನಿರ್ಮಾಣಗೊಳ್ಳಲಿರುವ ಆಸ್ಪತ್ರೆಯಲ್ಲಿ ಸೋಲಾರ್, ಮಳೆ ನೀರು ಸಂಗ್ರಹದ ವ್ಯವಸ್ಥೆ ಇರಲಿದೆ. ಈಗಿರುವ ನೂರು ಹಾಸಿಗೆ ಆಸ್ಪತ್ರೆಯಲ್ಲಿ ಕೆಲ ಉಪಕರಣಗಳ ಖರೀದಿಗೆ ಹೈದರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ₹50 ಲಕ್ಷ ಅನುದಾನ ಒದಗಿಸಲಾಗುವುದು’ ಎಂದು ತಿಳಿಸಿದರು.</p>.<p>ಉಪವಿಭಾಗಾಧಿಕಾರಿ ಶೇಖ್ ತನ್ವೀರ್ ಆಸಿಫ್, ತಹಶೀಲ್ದಾರ್ ಎಚ್. ವಿಶ್ವನಾಥ್, ಜಿಲ್ಲಾ ಆರೋಗ್ಯ ಅಧಿಕಾರಿ ಜನಾರ್ದನ್, ಜಿಲ್ಲಾ ಶಸ್ತ್ರಚಿಕಿತ್ಸಕ ಬಸಾರೆಡ್ಡಿ, ನೂರು ಹಾಸಿಗೆ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಸಲೀಂ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ: </strong>ಜಿಲ್ಲಾ ಖನಿಜ ನಿಧಿ ಅನುದಾನದಿಂದ ನಗರದ ನೂರು ಹಾಸಿಗೆ ಸರ್ಕಾರಿ ಆಸ್ಪತ್ರೆಯ ಖಾಲಿ ಜಾಗದಲ್ಲಿ 250 ಹಾಸಿಗೆಯ ಸುಸಜ್ಜಿತ ಆಸ್ಪತ್ರೆ ನಿರ್ಮಾಣಕ್ಕೆ ರೂಪುರೇಷೆ ತಯಾರಿಸಲಾಗುತ್ತಿದೆ.</p>.<p>ಜಿಲ್ಲಾಧಿಕಾರಿ ಎಸ್.ಎಸ್. ನಕುಲ್, ಶಾಸಕ ಆನಂದ್ ಸಿಂಗ್ ಸಮ್ಮುಖದಲ್ಲಿ ಶುಕ್ರವಾರ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು. ನುರಿತ ವೈದ್ಯರು, ಎಂಜಿನಿಯರ್ಗಳ ಸಲಹೆ ಪಡೆದು ಯಾವುದೇ ಕೊರತೆ ಉಂಟಾಗದ ರೀತಿಯಲ್ಲಿ ಕಟ್ಟಡ ನಿರ್ಮಿಸುವುದರ ಬಗ್ಗೆ ಸುದೀರ್ಘವಾಗಿ ಚರ್ಚಿಸಲಾಯಿತು.</p>.<p>‘ಒಂದು ಸುಸಜ್ಜಿತವಾದ ಆಸ್ಪತ್ರೆಗೆ ಏನೆಲ್ಲ ಬೇಕೋ ಅದೆಲ್ಲ ಇರಬೇಕು. ಆ ರೀತಿ ನೀಲ ನಕ್ಷೆ ಸಿದ್ಧಪಡಿಸಿ, ಅಂದಾಜು ವೆಚ್ಚ ತಯಾರಿಸಬೇಕು’ ಎಂದು ನಕುಲ್ ಅವರು ಎಂಜಿನಿಯರ್ಗಳಿಗೆ ನಿರ್ದೇಶನ ನೀಡಿದರು.</p>.<p>ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ, ‘₹104 ಕೋಟಿ ವೆಚ್ಚದಲ್ಲಿ 250 ಹಾಸಿಗೆ ಆಸ್ಪತ್ರೆ ನಿರ್ಮಿಸಲು ಉದ್ದೇಶಿಸಲಾಗಿದೆ. ಈ ಕುರಿತು ಪ್ರಾಥಮಿಕ ಹಂತದಲ್ಲಿ ಚರ್ಚೆ ನಡೆಸಿದ್ದೇವೆ. ಜನಪ್ರತಿನಿಧಿಗಳು, ತಜ್ಞರಿಂದ ಸಲಹೆ ಪಡೆಯಲಾಗಿದೆ. ಒಟ್ಟಾರೆ ನಾಲ್ಕು ಅಂತಸ್ತಿನ ಆಸ್ಪತ್ರೆ ಇದಾಗಲಿದೆ. ಪ್ರಸ್ತಾವ ಸಿದ್ಧಪಡಿಸಿ ರಾಜ್ಯ ಸರ್ಕಾರಕ್ಕೆ ಕಳುಹಿಸಿಕೊಡಲಾಗುವುದು. ರಾಜ್ಯ ಸಚಿವ ಸಂಪುಟದಲ್ಲಿ ಒಪ್ಪಿಗೆ ಸಿಕ್ಕ ನಂತರ ಕೆಲಸ ಆರಂಭಿಸಲಾಗುವುದು’ ಎಂದು ಹೇಳಿದರು.</p>.<p>‘ಹೊಸದಾಗಿ ನಿರ್ಮಾಣಗೊಳ್ಳಲಿರುವ ಆಸ್ಪತ್ರೆಯಲ್ಲಿ ಸೋಲಾರ್, ಮಳೆ ನೀರು ಸಂಗ್ರಹದ ವ್ಯವಸ್ಥೆ ಇರಲಿದೆ. ಈಗಿರುವ ನೂರು ಹಾಸಿಗೆ ಆಸ್ಪತ್ರೆಯಲ್ಲಿ ಕೆಲ ಉಪಕರಣಗಳ ಖರೀದಿಗೆ ಹೈದರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ₹50 ಲಕ್ಷ ಅನುದಾನ ಒದಗಿಸಲಾಗುವುದು’ ಎಂದು ತಿಳಿಸಿದರು.</p>.<p>ಉಪವಿಭಾಗಾಧಿಕಾರಿ ಶೇಖ್ ತನ್ವೀರ್ ಆಸಿಫ್, ತಹಶೀಲ್ದಾರ್ ಎಚ್. ವಿಶ್ವನಾಥ್, ಜಿಲ್ಲಾ ಆರೋಗ್ಯ ಅಧಿಕಾರಿ ಜನಾರ್ದನ್, ಜಿಲ್ಲಾ ಶಸ್ತ್ರಚಿಕಿತ್ಸಕ ಬಸಾರೆಡ್ಡಿ, ನೂರು ಹಾಸಿಗೆ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಸಲೀಂ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>