ಬಾಲಕಿ ಕೂಡ್ಲಿಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗ ರಕ್ತದೊತ್ತಡ ತೀವ್ರ ಕಡಿಮೆಯಿತ್ತು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಬಿಂದುಳನ್ನು ಬಳ್ಳಾರಿಯ ವಿಮ್ಸ್ಗೆ ಕರೆದೊಯ್ಯಲು ವೈದ್ಯರು ನಿರ್ಧರಿಸಿದ್ದರು. ಅದಕ್ಕಾಗಿ ಆಂಬುಲೆನ್ಸ್ ವ್ಯವಸ್ಥೆ ಕೂಡ ಮಾಡಿದ್ದರು. ಆದರೆ, ಬಾಲಕಿಯ ಚಿಕ್ಕಪ್ಪ, ವೈದ್ಯರ ಸಲಹೆಗೆ ವಿರುದ್ಧವಾಗಿ ಬಾಲಕಿಯನ್ನು ಬಸ್ನಲ್ಲಿ ಮನೆಗೆ ಕರೆದೊಯ್ದಿದ್ದಾರೆ. ಅನಂತರ ಬಾಲಕಿ ಕುಸಿದು ಬಿದ್ದು ಮೃತಪಟ್ಟಿದ್ದಾಳೆ ಎಂದು ತಿಳಿಸಿದರು.