ಸೂಕ್ತ ರಸ್ತೆ, ಬೀದಿ ದೀಪಗಳು, ಚರಂಡಿ ವ್ಯವಸ್ಥೆ ಇಲ್ಲ. ರಸ್ತೆಯ ಮೇಲೆ ಸದಾ ಬೀದಿ ನಾಯಿಗಳು, ದನಗಳು ಬೀಡುಬಿಟ್ಟಿರುತ್ತವೆ. ಚರಂಡಿ ಹೊಲಸು ರಸ್ತೆಯ ಮೇಲೆ ಹರಿಯುತ್ತದೆ. ಇದು ದುರ್ಗಂಧಕ್ಕೆ ಕಾರಣವಾಗಿದೆ. ಬೀದಿ ದೀಪಗಳು ಇಲ್ಲದೆ ಇರುವುದರಿಂದ ರಾತ್ರಿ ವೇಳೆ ಅಪಘಾತಗಳು ಸರ್ವೇ ಸಾಮಾನ್ಯ ಎಂಬಂತಾಗಿದೆ. ಅಷ್ಟೇ ಅಲ್ಲ, ರಾತ್ರಿ ಬೀದಿ ನಾಯಿಗಳು ಜನರ ಮೇಲೆ ಎರಗಿ ಬೀಳುತ್ತವೆ.