ವಿಜಯನಗರ ಕ್ಷೇತ್ರದ ಉಪಚುನಾವಣೆಯಲ್ಲಿ ಎಚ್.ಆರ್. ಗವಿಯಪ್ಪ ಬಿಜೆಪಿ ಟಿಕೆಟ್ನ ಪ್ರಮುಖ ಆಕಾಂಕ್ಷಿಯಾಗಿದ್ದರು. ಆದರೆ, ಪಕ್ಷವು ಅವರನ್ನು ಕಡೆಗಣಿಸಿ ಆನಂದ್ ಸಿಂಗ್ಗೆ ಮಣೆ ಹಾಕಿತ್ತು. ಅದರಿಂದ ಮುನಿಸಿಕೊಂಡಿದ್ದ ಗವಿಯಪ್ಪ ಪಕ್ಷದ ಚಟುವಟಿಕೆಗಳಿಂದ ಅಂತರ ಕಾಯ್ದುಕೊಂಡಿದ್ದರು. ಉಪಚುನಾವಣೆ ಮುಗಿಯುವವರೆಗೆ ಕ್ಷೇತ್ರಕ್ಕೆ ಕಾಲಿಡುವುದಿಲ್ಲ ಎಂದು ಹೇಳಿದ್ದರು. ಅದರಂತೆ ಅವರು ನಡೆದುಕೊಂಡಿದ್ದರು. ಕ್ಷೇತ್ರದ ಮತದಾರರಾಗಿದ್ದರೂ ಅವರು ಬಂದು ಮತ ಹಾಕಿರಲಿಲ್ಲ.