<p><strong>ಬಳ್ಳಾರಿ:</strong> ಜಿಲ್ಲೆಯ ವಿಭಜನೆಯನ್ನು ವಿರೋಧಿಸಿ ಅನಿರ್ದಿಷ್ಟ ಅವಧಿಯ ಮುಷ್ಕರ ನಡೆಸಿರುವ ಅಖಂಡ ಬಳ್ಳಾರಿ ಹೋರಾಟ ಸಮಿತಿಯ ಮುಖಂಡರನ್ನು ಮುಷ್ಕರದ ವೇದಿಕೆ ಬಳಿಯೇ ಭೇಟಿ ಮಾಡಿದ ಉಸ್ತುವಾರಿ ಸಚಿವ ಆನಂದ್ ಸಿಂಗ್, ಅಹವಾಲುಗಳನ್ನು ಆಲಿಸಿದರು.</p>.<p>'ರಾಜಕೀಯ ಕಾರಣಗಳಿಗಾಗಿ ಜಿಲ್ಲೆಯನ್ನು ವಿಭಜಿಸಿಲ್ಲ. ಸಣ್ಣ ಜಿಲ್ಲೆಗಳಲ್ಲಿ ಅಭಿವೃದ್ಧಿ ಹೆಚ್ಚು ವೇಗ ಪಡೆಯುತ್ತದೆ. ಆದರೂ ಎಲ್ಲರೂ ಆಕ್ಷೇಪಣೆಗಳನ್ನು ಸಲ್ಲಿಸಿ' ಎಂದು ಸಲಹೆ ನೀಡಿದರು.</p>.<p><strong>ಆಗ್ರಹ;</strong> 'ಬಳ್ಳಾರಿ ಆಂಧ್ರ ಗಡಿಪ್ರದೇಶದಲ್ಲಿದ್ದು, ಮುಂದೊಂದು ದಿನ ಬೆಳಗಾವಿಯಲ್ಲಾದಂತೆ ಭಾಷಾ ಸೌಹಾರ್ದತೆ ಕದಡಲು ಅವಕಾಶ ಕೊಡಬಾರದು. ಜಿಲ್ಲೆಯನ್ನು ಒಡೆಯದೆ ಅಖಂಡ ಬಳ್ಳಾರಿಗೆ ವಿಜಯನಗರ ಜಿಲ್ಲೆ ಎಂದು ಹೆಸರಿಡಿ' ಎಂದು ಹೋರಾಟಗಾರರು ಆಗ್ರಹಿಸಿದರು.<br /><br />'ನಿಮ್ಮಿಂದ ಮಾತ್ರ ಜಿಲ್ಲೆಯ ವಿಭಜನೆಯನ್ನು ತಪ್ಪಿಸಲು ಸಾಧ್ಯ' ಎಂದು ಪ್ರತಿಪಾದಿಸಿದರು.</p>.<p>ಅವರಿಗೆ ಪ್ರತಿಕ್ರಿಯಿಸಿದ ಸಚಿವರು, ' ಪಶ್ಚಿಮ ತಾಲೂಕುಗಳ ಅಹವಾಲನ್ನೂ ಆಲಿಸಬೇಕು. ಜಿಲ್ಲಾ ಕೇಂದ್ರವಾಗಿರುವ ಬಳ್ಳಾರಿಗೆ ಬರಲು ಆ ಭಾಗದ ಜನರಿಗೆ ಹೆಚ್ಚು ಕಷ್ಟವಾಗುತ್ತಿದೆ. ಹೊಸ ಜಿಲ್ಲೆಯಿಂದ ಈ ಕಷ್ಟ ತಪ್ಪುತ್ತದೆ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ಜಿಲ್ಲೆಯ ವಿಭಜನೆಯನ್ನು ವಿರೋಧಿಸಿ ಅನಿರ್ದಿಷ್ಟ ಅವಧಿಯ ಮುಷ್ಕರ ನಡೆಸಿರುವ ಅಖಂಡ ಬಳ್ಳಾರಿ ಹೋರಾಟ ಸಮಿತಿಯ ಮುಖಂಡರನ್ನು ಮುಷ್ಕರದ ವೇದಿಕೆ ಬಳಿಯೇ ಭೇಟಿ ಮಾಡಿದ ಉಸ್ತುವಾರಿ ಸಚಿವ ಆನಂದ್ ಸಿಂಗ್, ಅಹವಾಲುಗಳನ್ನು ಆಲಿಸಿದರು.</p>.<p>'ರಾಜಕೀಯ ಕಾರಣಗಳಿಗಾಗಿ ಜಿಲ್ಲೆಯನ್ನು ವಿಭಜಿಸಿಲ್ಲ. ಸಣ್ಣ ಜಿಲ್ಲೆಗಳಲ್ಲಿ ಅಭಿವೃದ್ಧಿ ಹೆಚ್ಚು ವೇಗ ಪಡೆಯುತ್ತದೆ. ಆದರೂ ಎಲ್ಲರೂ ಆಕ್ಷೇಪಣೆಗಳನ್ನು ಸಲ್ಲಿಸಿ' ಎಂದು ಸಲಹೆ ನೀಡಿದರು.</p>.<p><strong>ಆಗ್ರಹ;</strong> 'ಬಳ್ಳಾರಿ ಆಂಧ್ರ ಗಡಿಪ್ರದೇಶದಲ್ಲಿದ್ದು, ಮುಂದೊಂದು ದಿನ ಬೆಳಗಾವಿಯಲ್ಲಾದಂತೆ ಭಾಷಾ ಸೌಹಾರ್ದತೆ ಕದಡಲು ಅವಕಾಶ ಕೊಡಬಾರದು. ಜಿಲ್ಲೆಯನ್ನು ಒಡೆಯದೆ ಅಖಂಡ ಬಳ್ಳಾರಿಗೆ ವಿಜಯನಗರ ಜಿಲ್ಲೆ ಎಂದು ಹೆಸರಿಡಿ' ಎಂದು ಹೋರಾಟಗಾರರು ಆಗ್ರಹಿಸಿದರು.<br /><br />'ನಿಮ್ಮಿಂದ ಮಾತ್ರ ಜಿಲ್ಲೆಯ ವಿಭಜನೆಯನ್ನು ತಪ್ಪಿಸಲು ಸಾಧ್ಯ' ಎಂದು ಪ್ರತಿಪಾದಿಸಿದರು.</p>.<p>ಅವರಿಗೆ ಪ್ರತಿಕ್ರಿಯಿಸಿದ ಸಚಿವರು, ' ಪಶ್ಚಿಮ ತಾಲೂಕುಗಳ ಅಹವಾಲನ್ನೂ ಆಲಿಸಬೇಕು. ಜಿಲ್ಲಾ ಕೇಂದ್ರವಾಗಿರುವ ಬಳ್ಳಾರಿಗೆ ಬರಲು ಆ ಭಾಗದ ಜನರಿಗೆ ಹೆಚ್ಚು ಕಷ್ಟವಾಗುತ್ತಿದೆ. ಹೊಸ ಜಿಲ್ಲೆಯಿಂದ ಈ ಕಷ್ಟ ತಪ್ಪುತ್ತದೆ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>