ಅಂಗನವಾಡಿ ನೌಕರರ ಸಂಘ ತಾಲ್ಲೂಕು ಘಟಕದ ಅಧ್ಯಕ್ಷೆ ಕೆ.ನಾಗರತ್ನಮ್ಮ ಮಾತನಾಡಿ, ‘ಸಂಕಷ್ಟದಲ್ಲಿರುವ ಪುನರ್ವಸತಿ ಕಲ್ಪಿತ ದೇವದಾಸಿಯರು, ಒಂಟಿ ಮಹಿಳೆಯರು, ತೃತೀಯ ಲಿಂಗಿಗಳು, ಎಚ್ಐವಿ ಪೀಡಿತ ಪೌರಕಾರ್ಮಿಕ ವರ್ಗದ ಮಹಿಳೆಯರು ಸೇರಿದಂತೆ ಒಟ್ಟು 300 ಜನರಿಗೆ ಅಕ್ಕಿ, ಬೇಳೆ, ರವೆ, ಸಕ್ಕರೆ ಹಾಗೂ ಇತರೆ ಅಗತ್ಯ ವಸ್ತುಗಳನ್ನು ಒಳಗೊಂಡ ಕಿಟ್ ವಿತರಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಕಡಿಮೆ ವೇತನವಿದ್ದರೂ ಮತ್ತೊಬ್ಬರ ನೆರವಿಗೆ ಬಂದಿರುವುದು ಉತ್ತಮ ಕೆಲಸ’ ಎಂದು ಹೇಳಿದರು.