ಭೂ ವಿಜ್ಞಾನ ಇಲಾಖೆ ಹಿರಿಯ ಅಧಿಕಾರಿ ಭೇಟಿ: ‘ಅಕ್ರಮ ಮರಳು ಗಣಿಗಾರಿಕೆ, ಸಾಗಾಣಿಕೆ ತಡೆಯುವ ಉದ್ದೇಶದಿಂದ ಗಸ್ತು ತಿರುಗುತ್ತಿದ್ದ ವೇಳೆ ಗೌರಮ್ಮ ಕೆರೆ ರಸ್ತೆಯಲ್ಲಿ ಜನ– ವಾಹನ ಸಂಚಾರ ಕಂಡುಬಂತು. ಸ್ಥಳಕ್ಕೆ ಹೋಗಿ ಪರಿಶೀಲಿಸಿದಾಗ ಅಕ್ರಮ ಅಕ್ಕಿ ದಾಸ್ತಾನು ಕಂಡುಬಂತು. ಕೂಡಲೇ ಆಹಾರ ಮತ್ತು ಕಂದಾಯ ಇಲಾಖೆ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ಮಾಹಿತಿ ನೀಡಿದೆ’ ಎಂದು ಭೂ ವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿ ಚಂದ್ರಶೇಖರ್ ಹಿರೇಮಠ್ ತಿಳಿಸಿದರು.