ಚೆನ್ನೈ: ಕಾವೇರಿ ನದಿ ನೀರು ಹಂಚಿಕೆ ವಿವಾದ ಸಂಬಂಧ ತಮಿಳುನಾಡಿನಲ್ಲಿ ಪ್ರತಿಭಟನೆ ನಡೆಯುತ್ತಿರುವಾಗ ಐಪಿಎಲ್ ಪಂದ್ಯ ಆಯೋಜನೆ ಮಾಡಿರುವುದು ಸರಿಯಲ್ಲ ಎಂದು ನಟ ರಜನಿಕಾಂತ್ ಟೀಕಿಸಿದ್ದಾರೆ.
ಕಾವೇರಿ ವಿಚಾರದಲ್ಲಿ ಒಗ್ಗಟ್ಟು ಪ್ರದರ್ಶಿಸುವ ಸಲುವಾಗಿ ಚನ್ನೈ ಸೂಪರ್ ಕಿಂಗ್ಸ್ ತಂಡವೂ ಬೆಂಬಲಿಸಬೇಕು. ಅವರು ಪಂದ್ಯ ರದ್ದುಗೊಳಿಸಿದರೆ ಒಳ್ಳೆಯದು. ಇಲ್ಲದಿದ್ದರೆ ಪಂದ್ಯದಲ್ಲಿ ಕಪ್ಪು ಪಟ್ಟಿ ಧರಿಸಿ, ಹೋರಾಟಗಾರರಿಗೆ ಬೆಂಬಲ ಸೂಚಿಸಬೇಕು‘ ಎಂದು ಅವರು ಹೇಳಿದ್ದಾರೆ.