ಒಕ್ಕೂಟದ ಮುಖಂಡರಾದ ಲಕ್ಷ್ಮಣ ಪೀರಗಾರ, ಪಿ.ಅಬ್ದುಲ್, ರಮೇಶ ಹಂಚಿನಮನೆ, ಸರದಾರ ಬಾರಿಗಿಡ, ಟಿ.ರಾಜಾರಾವ್, ರಾಜು ಕುಲಕರ್ಣಿ, ಅರುಣ್ ಕುಮಾರ್ ಮೇದಾರ್ ಸೋಮವಾರ ನಗರದ ಸಿದ್ದಲಿಂಗಪ್ಪ ಚೌಕಿಯ ಭಾವೈಕ್ಯತಾ ವೇದಿಕೆಯಲ್ಲಿ ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು. ಬಳಿಕ ಸ್ಥಳಕ್ಕೆ ಬಂದ ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷೆ ಬಿ.ಮಂಜಮ್ಮ ಜೋಗತಿ ಮೂಲಕ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಿಗೆ ಬರೆದ ಮನವಿ ಪತ್ರ ಸಲ್ಲಿಸಿದರು.