ಚಪ್ಪಾಳೆ ತಟ್ಟಿ, ಹೂಮಳೆ ಸುರಿಸಿ, ಶಾಲು ಹಾಕುವುದರಿಂದ ಆಶಾ ಕಾರ್ತಕರ್ತೆಯರ ಹೊಟ್ಟೆ ತುಂಬಲ್ಲ. ಸರ್ಕಾರದ ನಿರ್ಲಕ್ಷ್ಯದಿಂದ ಅಶಾ ಕಾರ್ಯಕರ್ತೆಯರಿಗೂ ಸೋಂಕು ತಗುಲುತ್ತಿದೆ. ಸೂಕ್ತ ಸುರಕ್ಷತಾ ಸಾಮಗ್ರಿಗಳನ್ನು ಕೊಟ್ಟಿಲ್ಲ. ಪದೇ, ಪದೇ ಆರೋಗ್ಯ ತಪಾಸಣೆ ನಡೆಸಬೇಕು. ಸೋಂಕು ತಗುಲಿರುವ ಆಶಾ ಕಾರ್ಯಕರ್ತೆಯರ ಚಿಕಿತ್ಸೆ ಅವಧಿಯಲ್ಲಿ ಗೌರವಧನ ಕೊಡಬೇಕು. ಎನ್ 95 ಮಾಸ್ಕ್, ಹ್ಯಾಂಡ್ ಗ್ಲೌಸ್, ಫೇಸ್ ಶೀಲ್ಡ್, ಸ್ಯಾನಿಟೈಜರ್ ಗಳನ್ನು ವಿತರಿಸಬೇಕು ಎಂದು ಅಗ್ರಹಿಸಿದರು.